ಬಿಡುಗಡೆ ಬಳಿಕ ನಳಿನಿ ಮತ್ತು ರವಿಚಂದ್ರನ್ ಭಾರತೀಯ ಪ್ರಜೆಗಳು. ಹೀಗಾಗಿ ಅವರು ತಮ್ಮ ಊರುಗಳಿಗೆ ತೆರಳಿದರು. ಆದರೆ, ಭಾರತಕ್ಕೆ ಅಕ್ರಮವಾಗಿ ನುಸುಳಿದ್ದ, ಶ್ರೀಲಂಕಾ ಪ್ರಜೆಗಳಾದ ಮುರುಗನ್, ಸಂತನ್ ಹಾಗೂ ಚೆನ್ನೈಗೆ ಸಮೀಪದ ಪುಝಲ್ ಕಾರಾಗೃಹದಿಂದ ಬಿಡುಗಡೆಯಾದ ರಾಬರ್ಟ್ ಪಯಾಸ್ ಮತ್ತು ಜಯಕುಮಾರ್ ಅವರನ್ನು ಪೊಲೀಸ್ ವಾಹನದಲ್ಲಿ ತಿರುಚಿರಾಪಳ್ಳಿಯಲ್ಲಿರುವ ವಿಶೇಷ ನಿರಾಶ್ರಿತರ ಶಿಬಿರಕ್ಕೆ ಕರೆದೊಯ್ಯಲಾಯಿತು.