ಘಟನೆ ಕುರಿತು ಮಾಹಿತಿ ನೀಡಿರುವ ಯರವಾಡ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶೇಖ್, ‘ಇದುವರೆಗೆ ಆರು ಮಂದಿ ಮೃತಪಟ್ಟಿರುವುದು ತಿಳಿದುಬಂದಿದೆ. ಅವರ ದೇಹಗಳನ್ನು ಸಾಸೂನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದು ನಿರ್ಮಾಣ ಹಂತದಲ್ಲಿರುವ ಕಟ್ಟಡವಾಗಿದ್ದು, ಘಟನೆ ಸಂಭವಿಸಿದಾಗ ಕಾರ್ಮಿಕರು ಚಾವಣಿ ಕೆಲಸದಲ್ಲಿ ತೊಡಗಿದ್ದರು’ ಎಂದು ಹೇಳಿದ್ದಾರೆ.