ಅಮೃತಸರ: ಹಿರಿಯ ಕಾಂಗ್ರೆಸ್ ನಾಯಕ, ಆರು ಬಾರಿ ಸಂಸದರಾಗಿದ್ದ ರಘುನಂದನ್ ಲಾಲ್ ಭಾಟಿಯಾ ಅವರು (100) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು ಎಂದು ಅವರ ಕುಟುಂಬದ ಸದಸ್ಯರೊಬ್ಬರು ತಿಳಿಸಿದರು.
‘ಶುಕ್ರವಾರ ರಾತ್ರಿ ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ರಘುನಂದನ್ ಅವರು ಕೊನೆ ಉಸಿರೆಳೆದರು’ ಎಂದು ಅವರು ಹೇಳಿದರು.
ರಘುನಂದನ್ ಅವರು ಅಮೃತಸರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 1972ರಲ್ಲಿ ಮೊದಲ ಬಾರಿ ಲೋಕಸಭೆಗೆ ಚುನಾಯಿತರಾಗಿದ್ದರು. ಬಳಿಕ 1980, 1985, 1992, 1996 ಮತ್ತು 1999ರಲ್ಲೂ ಕಾಂಗ್ರೆಸ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
1992ರಲ್ಲಿ ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ ಅವರು, 2004ರಿಂದ 2008ರ ತನಕ ಕೇರಳ ಮತ್ತು 2008ರಿಂದ 2009ರ ತನಕ ಬಿಹಾರದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.
Began the day with an early morning meeting with Congress stalwart & six time MP from Guru Nagri Shri Raghunandan Lal Bhatia Ji.
I had the privilege of working under him when he was our MoS-External Affairs in 1992-93 & I was posted on Americas Desk as Jt. Secy.@BJP4Punjabpic.twitter.com/yvwJFw1y0w