ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಶಾನದಲ್ಲಿ ಹೂತಿಟ್ಟಿದ್ದ 16 ಕೆ.ಜಿ ಕದ್ದ ಚಿನ್ನ ತಮಿಳುನಾಡು ಪೊಲೀಸರ ವಶಕ್ಕೆ

Last Updated 20 ಡಿಸೆಂಬರ್ 2021, 15:45 IST
ಅಕ್ಷರ ಗಾತ್ರ

ಚೆನ್ನೈ: ಚಿನ್ನದಂಗಡಿಯ ದೋಚಿ ಸ್ಮಶಾನದಲ್ಲಿ ಹೂತಿಟ್ಟಿದ್ದ 16 ಕೆ.ಜಿಯಷ್ಟು ಬಂಗಾರವನ್ನು ತಮಿಳುನಾಡಿನ ವೆಲ್ಲೂರು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಡಿಸೆಂಬರ್ 15ರಂದು ವೆಲ್ಲೂರಿನ ಪ್ರತಿಷ್ಠಿತ ಚಿನ್ನದಂಗಡಿಗೆ ಪ್ರವೇಶಿಸಿದ್ದ ಮುಸುಕುಧಾರಿ ವ್ಯಕ್ತಿಯೊಬ್ಬ ಚಿನ್ನವನ್ನು ದೋಚಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಚೋರನ ಬೇಟೆಗೆ ವಿಶೇಷ ತನಿಖಾ ತಂಡ ರಚಿಸಿದ್ದ ಪೊಲೀಸರು, ಅನೈಕಟ್‌ನಲ್ಲಿ ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದರು. ಬಳಿಕ, ಆತ ನೀಡಿದ ಸುಳಿವಿನ ಮೇಲೆ ಸ್ಮಶಾನದಲ್ಲಿ ಹೂತಿಟ್ಟಿದ್ದ ಚಿನ್ನವನ್ನು ಪತ್ತೆ ಮಾಡಿದ್ದಾರೆ. ಬಂಧಿತ ವ್ಯಕ್ತಿ ಕುರಿತಂತೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಿಲ್ಲ.

ತನಿಖೆ ವೇಳೆ, ಜುವೆಲ್ಲರಿ ಶೋರೂಮ್‌ನಿಂದ ಕದ್ದ ಚಿನ್ನವನ್ನು ವೆಲ್ಲೂರಿನಿಂದ 40 ಕಿ.ಮೀ ದೂರದ ಒಡುಕತ್ತೂರಿನ ಸ್ಮಶಾನದಲ್ಲಿ ಹೂತಿಟ್ಟಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT