<p><strong>ಲಖನೌ: </strong>ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಸೋಮವಾರ (ನ.22) ಲಖನೌ ನಗರದಲ್ಲಿ ‘ರೈತರ ಮಹಾಪಂಚಾಯತ್’ ನಡೆಸಲು ನಿರ್ಧರಿಸಿದೆ.</p>.<p>ನಗರದ ಇಕೊ ಗಾರ್ಡನ್ನಲ್ಲಿ ಈ ಮಹಾಪಂಚಾಯತ್ ನಡೆಯಲಿದೆ. ರೈತ ಸಂಘಟನೆಗಳು ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಈ ಸಮಾವೇಶ ಆಯೋಜಿಸಿವೆ ಎಂದು ಮೂಲಗಳು ಹೇಳಿವೆ.</p>.<p>ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಶುಕ್ರವಾರ ಘೋಷಿಸಿದರು. ಆದರೆ, ಇದಕ್ಕೂ ಕೆಲ ತಿಂಗಳ ಮೊದಲೇ ಈ ಸ್ಥಳದಲ್ಲಿ ಮಹಾಪಂಚಾಯತ್ ಆಯೋಜಿಸಲು ಎಸ್ಕೆಎಂ ತೀರ್ಮಾನಿಸಿತ್ತು ಎಂದು ಇವೇ ಮೂಲಗಳು ಹೇಳಿವೆ.</p>.<p>‘ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ರೂಪ ನೀಡಬೇಕು, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ರೈತ ಮುಖಂಡರು ಹೇಳಿದ್ದಾರೆ.</p>.<p>ಲಖನೌದಲ್ಲಿ ನಡೆಯಲಿರುವ ಕಿಸಾನ್ ಮಹಾಪಂಚಾಯತ್ ಕುರಿತು ಭಾರತೀಯ ಕಿಸಾನ್ ಯೂನಿಯನ್ನ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ಹಿಂದಿಯಲ್ಲಿ ಭಾನುವಾರ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಸೋಮವಾರ (ನ.22) ಲಖನೌ ನಗರದಲ್ಲಿ ‘ರೈತರ ಮಹಾಪಂಚಾಯತ್’ ನಡೆಸಲು ನಿರ್ಧರಿಸಿದೆ.</p>.<p>ನಗರದ ಇಕೊ ಗಾರ್ಡನ್ನಲ್ಲಿ ಈ ಮಹಾಪಂಚಾಯತ್ ನಡೆಯಲಿದೆ. ರೈತ ಸಂಘಟನೆಗಳು ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಈ ಸಮಾವೇಶ ಆಯೋಜಿಸಿವೆ ಎಂದು ಮೂಲಗಳು ಹೇಳಿವೆ.</p>.<p>ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಶುಕ್ರವಾರ ಘೋಷಿಸಿದರು. ಆದರೆ, ಇದಕ್ಕೂ ಕೆಲ ತಿಂಗಳ ಮೊದಲೇ ಈ ಸ್ಥಳದಲ್ಲಿ ಮಹಾಪಂಚಾಯತ್ ಆಯೋಜಿಸಲು ಎಸ್ಕೆಎಂ ತೀರ್ಮಾನಿಸಿತ್ತು ಎಂದು ಇವೇ ಮೂಲಗಳು ಹೇಳಿವೆ.</p>.<p>‘ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ರೂಪ ನೀಡಬೇಕು, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ರೈತ ಮುಖಂಡರು ಹೇಳಿದ್ದಾರೆ.</p>.<p>ಲಖನೌದಲ್ಲಿ ನಡೆಯಲಿರುವ ಕಿಸಾನ್ ಮಹಾಪಂಚಾಯತ್ ಕುರಿತು ಭಾರತೀಯ ಕಿಸಾನ್ ಯೂನಿಯನ್ನ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ಹಿಂದಿಯಲ್ಲಿ ಭಾನುವಾರ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>