ಈ ಕುರಿತು ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ಯೋಗೇಂದ್ರ ಯಾದವ್, ‘ಟಿಕ್ರಿ ಗಡಿಯಲ್ಲಿ ಮಹಿಳೆ ಕಾರ್ಯಕರ್ತೆಯ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಕೆಲವು ರೈತ ಮುಖಂಡರಿಗೆ ತಿಳಿದಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ವರದಿಯನ್ನು ಸುದ್ದಿ ವಾಹಿನಿಗಳ ಮೂಲಕ ತಿಳಿದಿದ್ದೇವೆ. ಆದರೆ ಈ ವರದಿಯನ್ನು ಈಗಲೇ ಖಚಿತಪಡಿಸಲು ಸಾಧ್ಯವಿಲ್ಲ. ಆದರೆ, ಆ ಆರೋಪದ ಕುರಿತು ತನಿಖೆ ನಡೆಸುತ್ತೇವೆ. ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತೇವೆ' ಎಂದು ತಿಳಿಸಿದರು.