ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಗೆ ಚಪ್ಪಲಿ ತಂದುಕೊಟ್ಟ ತೆಲಂಗಾಣ ಬಿಜೆಪಿ ಅಧ್ಯಕ್ಷ: ವಿಡಿಯೊ ಹಂಚಿಕೊಂಡ ಕೆಟಿಆರ್‌

Last Updated 22 ಆಗಸ್ಟ್ 2022, 11:18 IST
ಅಕ್ಷರ ಗಾತ್ರ

ಹೈದರಾಬಾದ್‌: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್‌ ಶಾ ಅವರಿಗೆ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಅವರು ಚಪ್ಪಲಿಗಳನ್ನು ತಂದುಕೊಡುತ್ತಿರುವ ವಿಡಿಯೊವನ್ನು ಸಚಿವ ಕೆ.ಟಿ ರಾಮರಾವ್‌ (ಕೆಟಿಆರ್‌) ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಮಿತ್‌ ಶಾ ಅವರು ತೆಲಂಗಾಣ ಪ್ರವಾಸ ಕೈಗೊಂಡಿದ್ದು, ಈ ವೇಳೆ ಅವರು ಸೋಮವಾರ ದೇವಾಲಯವೊಂದಕ್ಕೆ ಭೇಟಿ ನೀಡಿದ್ದಾರೆ. ದರ್ಶನ ಮುಗಿಸಿ ಹೊರ ಬಂದ ಅಮಿತ್‌ ಶಾ ಅವರಿಗೆ ಬಂಡಿ ಸಂಜಯ್‌ ಅವರು ಚಪ್ಪಲಿಗಳನ್ನು ತಂದು ಕೊಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ವಿಡಿಯೊವನ್ನು ಹಂಚಿಕೊಂಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರ ಪುತ್ರ ಕೆಟಿಆರ್‌, ‘ದೆಹಲಿಯ ‘ಚಪ್ಪಲಿ’ಗಳನ್ನು ಹೊರುವ ಗುಜರಾತಿ ಗುಲಾಮರನ್ನು ತೆಲಂಗಾಣ ಗಮನಿಸುತ್ತಿದೆ. ತೆಲಂಗಾಣದ ಸ್ವಾಭಿಮಾನವನ್ನು ಕೆಣಕುವ, ಅವಹೇಳನ ಮಾಡುವ ಯಾವುದೇ ಪ್ರಯತ್ನವನ್ನು ಹಿಮ್ಮೆಟ್ಟಿಸುತ್ತೇವೆ. ಜೈ ತೆಲಂಗಾಣ’ ಎಂದು ಅವರು ಹೇಳಿದ್ದಾರೆ.

ಅಮಿತ್‌ ಶಾ ಅವರು ಭಾನುವಾರ ಹೈದರಾಬಾದ್‌ನ ಬೇಗುಂಪೇಟ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ನೇರವಾಗಿ ಸಿಕಂದರಾಬಾದ್‌ನ ಉಜ್ಜಯಿನಿ ಮಹಾಂಕಾಳಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಅವರು ಮುನುಗೋಡು ಉಪಚುನಾವಣೆಯ ಸಮಾವೇಶಕ್ಕೆ ತೆರಳಿದರು. ಅಲ್ಲಿ ಮಾತನಾಡಿದ್ದ ಅವರು, ತೆಲಂಗಾಣದ ಟಿಆರ್‌ಎಸ್‌ ಸರ್ಕಾರವನ್ನು ಕಿತ್ತೊಗೆಯುವುದಾಗಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT