ಅಮಿತ್ ಶಾ ಅವರು ಭಾನುವಾರ ಹೈದರಾಬಾದ್ನ ಬೇಗುಂಪೇಟ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ನೇರವಾಗಿ ಸಿಕಂದರಾಬಾದ್ನ ಉಜ್ಜಯಿನಿ ಮಹಾಂಕಾಳಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಅವರು ಮುನುಗೋಡು ಉಪಚುನಾವಣೆಯ ಸಮಾವೇಶಕ್ಕೆ ತೆರಳಿದರು. ಅಲ್ಲಿ ಮಾತನಾಡಿದ್ದ ಅವರು, ತೆಲಂಗಾಣದ ಟಿಆರ್ಎಸ್ ಸರ್ಕಾರವನ್ನು ಕಿತ್ತೊಗೆಯುವುದಾಗಿ ಹೇಳಿದ್ದರು.