<p><strong>ನವದೆಹಲಿ:</strong> ‘ಬಾಲ ಕಾರ್ಮಿಕ ಪದ್ಧತಿಯ ನಿದರ್ಶನಗಳು ಕಂಡುಬಂದಲ್ಲಿ ಪೆನ್ಸಿಲ್ ಪೋರ್ಟಲ್ ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ತಿಳಿಸಬೇಕು’ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ನಾಗರಿಕರಲ್ಲಿ ಶನಿವಾರ ಮನವಿ ಮಾಡಿದ್ದಾರೆ.</p>.<p>ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಅವರು, ‘ ಪ್ರತಿ ಮಗುವಿಗೆ ಸಂತೋಷಕರ ಬಾಲ್ಯ ಮತ್ತು ಶಿಕ್ಷಣ ಪಡೆಯುವ ಹಕ್ಕಿದೆ. ಈ ದಿನದಂದು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ. ನಾವೆಲ್ಲರೂ ಜತೆಯಾಗಿ ಮಕ್ಕಳಿಗೆ ಉತ್ತಮ ಬಾಲ್ಯವನ್ನು ಕೊಡಬಹುದು. ಉತ್ತಮ ಬಾಲ್ಯವನ್ನು ಹೊಂದುವ ಅರ್ಹತೆ ಎಲ್ಲಾ ಮಕ್ಕಳಿಗೂ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<p>‘ಎಲ್ಲಾದರೂ ಬಾಲ ಕಾರ್ಮಿಕ ಪದ್ಧತಿ ಕಂಡು ಬಂದರೆ, ಈ ಬಗ್ಗೆ ಪೆನ್ಸಿಲ್ ಪೋರ್ಟಲ್ http://pencil.gov.in ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ದೂರ ಸಲ್ಲಿಸಬೇಕು. ನಮ್ಮ ಮಕ್ಕಳು ಮತ್ತು ದೇಶದ ಭವಿಷ್ಯಕ್ಕಾಗಿ ನಾವು ಈ ಕೆಲಸವನ್ನು ಮಾಡಬೇಕಿದೆ’ ಎಂದು ಅವರು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬಾಲ ಕಾರ್ಮಿಕ ಪದ್ಧತಿಯ ನಿದರ್ಶನಗಳು ಕಂಡುಬಂದಲ್ಲಿ ಪೆನ್ಸಿಲ್ ಪೋರ್ಟಲ್ ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ತಿಳಿಸಬೇಕು’ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ನಾಗರಿಕರಲ್ಲಿ ಶನಿವಾರ ಮನವಿ ಮಾಡಿದ್ದಾರೆ.</p>.<p>ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಅವರು, ‘ ಪ್ರತಿ ಮಗುವಿಗೆ ಸಂತೋಷಕರ ಬಾಲ್ಯ ಮತ್ತು ಶಿಕ್ಷಣ ಪಡೆಯುವ ಹಕ್ಕಿದೆ. ಈ ದಿನದಂದು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ. ನಾವೆಲ್ಲರೂ ಜತೆಯಾಗಿ ಮಕ್ಕಳಿಗೆ ಉತ್ತಮ ಬಾಲ್ಯವನ್ನು ಕೊಡಬಹುದು. ಉತ್ತಮ ಬಾಲ್ಯವನ್ನು ಹೊಂದುವ ಅರ್ಹತೆ ಎಲ್ಲಾ ಮಕ್ಕಳಿಗೂ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<p>‘ಎಲ್ಲಾದರೂ ಬಾಲ ಕಾರ್ಮಿಕ ಪದ್ಧತಿ ಕಂಡು ಬಂದರೆ, ಈ ಬಗ್ಗೆ ಪೆನ್ಸಿಲ್ ಪೋರ್ಟಲ್ http://pencil.gov.in ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ದೂರ ಸಲ್ಲಿಸಬೇಕು. ನಮ್ಮ ಮಕ್ಕಳು ಮತ್ತು ದೇಶದ ಭವಿಷ್ಯಕ್ಕಾಗಿ ನಾವು ಈ ಕೆಲಸವನ್ನು ಮಾಡಬೇಕಿದೆ’ ಎಂದು ಅವರು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>