<p><strong>ತಿರುವನಂತಪುರ:</strong> ‘ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಿಂದ ಗಾಂಧಿ ಕುಟುಂಬದವರೇ ಐದು ದಶಕಗಳ ಕಾಲ ಗೆದ್ದುಬಂದಿದ್ದರು. ಆದರೂ, ಅವರ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಜನರನ್ನು ತಲುಪಿಲ್ಲ’ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಭಾನುವಾರ ಹೇಳಿದರು.</p>.<p>‘ಈ ಕ್ಷೇತ್ರದಿಂದ ಗಾಂಧಿ ಕುಟುಂಬಸ್ಥರು ಚುನಾಯಿತರಾಗಿದ್ದರೂ, ಅವರು ಕ್ಷೇತ್ರದ ಸೇವೆ ಮಾಡಲಿಲ್ಲ ಎಂಬ ಭಾವನೆ ಇಲ್ಲಿನ ಜನರಲ್ಲಿದೆ’ ಎಂದರು.</p>.<p><strong>ಓದಿ:</strong><a href="https://www.prajavani.net/india-news/punjab-congress-crisis-ambika-soni-declines-next-chief-minister-post-867987.html" itemprop="url">ಪಂಜಾಬ್: ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದ ಅಂಬಿಕಾ ಸೋನಿ</a></p>.<p>ಆರ್ಎಸ್ಎಸ್ನ ಅಂಗಸಂಸ್ಥೆ ‘ದೇಶೀಯ ಸೇವಾ ಭಾರತಿ’ ವತಿಯಿಂದ ಇಲ್ಲಿ ಆಯೋಜಿಸಿದ್ದ ‘ಸೇವಾ ಸಮರ್ಪಣ’ ಕಾರ್ಯಕ್ರಮವನ್ನು ಅವರು ವರ್ಚುವಲ್ ವಿಧಾನದ ಮೂಲಕ ಉದ್ಘಾಟಿಸಬೇಕಿತ್ತು. ಆದರೆ, ಇಂಟರ್ನೆಟ್ ಸಂಪರ್ಕ ಸಿಗದ ಕಾರಣ, ಅವರು ತಡವಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ನಾನು ಅಮೇಠಿಯಿಂದ ದೂರವಿರುವ ಊರಲ್ಲಿದ್ದು, ಇಲ್ಲಿ ಇಂಟರ್ನೆಟ್ ಸಂಪರ್ಕ ಸಿಗುತ್ತಿಲ್ಲ. ಈ ಕಾರಣದಿಂದ ಕಾರ್ಯಕ್ರಮದಲ್ಲಿ ನಿಗದಿತ ಸಮಯದೊಳಗೆ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ’ ಎಂದರು.</p>.<p>‘ಇಲ್ಲಿ ಸಮರ್ಪಕ ಇಂಟರ್ನೆಟ್ ಸಂಪರ್ಕ ಪಡೆಯಲು ಸಾಕಷ್ಟು ಹೆಣಗಾಡಬೇಕು. ಅದರಲ್ಲೂ, ಗ್ರಾಮಾಂತರ ಪ್ರದೇಶದಲ್ಲಿ ಇಂಟರ್ನೆಟ್ ಸಂಪರ್ಕ ಪಡೆಯುವುದು ದೊಡ್ಡ ಸವಾಲೇ ಆಗಿದೆ. ಇದರಿಂದಾಗಿಯೇ ಸೇವಾ ಭಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾನು ಸಾಕಷ್ಟು ಪರದಾಡಬೇಕಾಯಿತು. ಗಾಂಧಿ ಕುಟುಂಬಸ್ಥರು ಐದು ದಶಕಗಳ ಕಾಲ ಅಧಿಕಾರದಲ್ಲಿದ್ದರೂ, ಈ ಕ್ಷೇತ್ರದಲ್ಲಿ ಜನರಿಗೆ ಅಭಿವೃದ್ಧಿ ಮರೀಚಿಕೆ ಆಗಿತ್ತು ಎಂಬುದು ಇಂದು ನಿಮಗೆ ಅರ್ಥವಾಗಿರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಿಂದ ಗಾಂಧಿ ಕುಟುಂಬದವರೇ ಐದು ದಶಕಗಳ ಕಾಲ ಗೆದ್ದುಬಂದಿದ್ದರು. ಆದರೂ, ಅವರ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಜನರನ್ನು ತಲುಪಿಲ್ಲ’ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಭಾನುವಾರ ಹೇಳಿದರು.</p>.<p>‘ಈ ಕ್ಷೇತ್ರದಿಂದ ಗಾಂಧಿ ಕುಟುಂಬಸ್ಥರು ಚುನಾಯಿತರಾಗಿದ್ದರೂ, ಅವರು ಕ್ಷೇತ್ರದ ಸೇವೆ ಮಾಡಲಿಲ್ಲ ಎಂಬ ಭಾವನೆ ಇಲ್ಲಿನ ಜನರಲ್ಲಿದೆ’ ಎಂದರು.</p>.<p><strong>ಓದಿ:</strong><a href="https://www.prajavani.net/india-news/punjab-congress-crisis-ambika-soni-declines-next-chief-minister-post-867987.html" itemprop="url">ಪಂಜಾಬ್: ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದ ಅಂಬಿಕಾ ಸೋನಿ</a></p>.<p>ಆರ್ಎಸ್ಎಸ್ನ ಅಂಗಸಂಸ್ಥೆ ‘ದೇಶೀಯ ಸೇವಾ ಭಾರತಿ’ ವತಿಯಿಂದ ಇಲ್ಲಿ ಆಯೋಜಿಸಿದ್ದ ‘ಸೇವಾ ಸಮರ್ಪಣ’ ಕಾರ್ಯಕ್ರಮವನ್ನು ಅವರು ವರ್ಚುವಲ್ ವಿಧಾನದ ಮೂಲಕ ಉದ್ಘಾಟಿಸಬೇಕಿತ್ತು. ಆದರೆ, ಇಂಟರ್ನೆಟ್ ಸಂಪರ್ಕ ಸಿಗದ ಕಾರಣ, ಅವರು ತಡವಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ನಾನು ಅಮೇಠಿಯಿಂದ ದೂರವಿರುವ ಊರಲ್ಲಿದ್ದು, ಇಲ್ಲಿ ಇಂಟರ್ನೆಟ್ ಸಂಪರ್ಕ ಸಿಗುತ್ತಿಲ್ಲ. ಈ ಕಾರಣದಿಂದ ಕಾರ್ಯಕ್ರಮದಲ್ಲಿ ನಿಗದಿತ ಸಮಯದೊಳಗೆ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ’ ಎಂದರು.</p>.<p>‘ಇಲ್ಲಿ ಸಮರ್ಪಕ ಇಂಟರ್ನೆಟ್ ಸಂಪರ್ಕ ಪಡೆಯಲು ಸಾಕಷ್ಟು ಹೆಣಗಾಡಬೇಕು. ಅದರಲ್ಲೂ, ಗ್ರಾಮಾಂತರ ಪ್ರದೇಶದಲ್ಲಿ ಇಂಟರ್ನೆಟ್ ಸಂಪರ್ಕ ಪಡೆಯುವುದು ದೊಡ್ಡ ಸವಾಲೇ ಆಗಿದೆ. ಇದರಿಂದಾಗಿಯೇ ಸೇವಾ ಭಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾನು ಸಾಕಷ್ಟು ಪರದಾಡಬೇಕಾಯಿತು. ಗಾಂಧಿ ಕುಟುಂಬಸ್ಥರು ಐದು ದಶಕಗಳ ಕಾಲ ಅಧಿಕಾರದಲ್ಲಿದ್ದರೂ, ಈ ಕ್ಷೇತ್ರದಲ್ಲಿ ಜನರಿಗೆ ಅಭಿವೃದ್ಧಿ ಮರೀಚಿಕೆ ಆಗಿತ್ತು ಎಂಬುದು ಇಂದು ನಿಮಗೆ ಅರ್ಥವಾಗಿರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>