<p><strong>ಶ್ರೀನಗರ:</strong> ಕಾಶ್ಮೀರದಲ್ಲಿ ಶನಿವಾರ ಸುರಿದ ಭಾರಿ ಮಳೆ ಮತ್ತು ಹಿಮಪಾತ ಸಂಬಂಧಿತ ಅವಘಡಗಳಿಂದಾಗಿ ಮೂವರು ಮೃತಪಟ್ಟಿದ್ದಾರೆ. ಸೇಬು ತೋಟಗಳಿಗೆ ಅಪಾರ ಹಾನಿಯಾಗಿದೆ.</p>.<p>ಶ್ರೀನಗರದಲ್ಲಿ ಶನಿವಾರ ಅಕ್ಟೋಬರ್ ತಿಂಗಳ ಕನಿಷ್ಠ ತಾಪಮಾನ ದಾಖಲಾಗಿದೆ.</p>.<p>ಶುಕ್ರವಾರ ರಾತ್ರಿಯೇ ಮಳೆ ಹಾಗೂ ಹಿಮಪಾತ ಆರಂಭವಾಗಿತ್ತು. ಪುಲ್ವಾಮಾದ ಟ್ರಾಲ್ ಪ್ರದೇಶದ ನೂರ್ಪೊರಾದಲ್ಲಿ ಟೆಂಟೊಂದರ ಮೇಲೆ ಭೂಕುಸಿತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/state-name-for-jammu-kashmir-after-elections-amit-shah-878129.html" itemprop="url">ಚುನಾವಣೆ ಬಳಿಕ ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನ: ಅಮಿತ್ ಶಾ</a></p>.<p>ಗುಲ್ಮಾರ್ಗ್, ಸೋನಾಮಾರ್ಗ್, ಪಹಲ್ಗಾಂ, ಶೋಪಿಯಾನ್ ಹಾಗೂ ಗ್ರುಯೆಜ್ ಪ್ರದೇಶಗಳಲ್ಲಿ ಸಾಧಾರಣ ಹಿಮಪಾತವಾಗಿದೆ. ಮೀನಾಮಾರ್ಗ್, ಲಾಡಾಖ್ನ ದ್ರಾಸ್ ಪ್ರದೇಶಗಳಲ್ಲಿಯೂ ಶುಕ್ರವಾರದಿಂದ ಹಿಮಪಾತವಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>ದಕ್ಷಿಣ ಕಾಶ್ಮೀರದ ಶೋಪಿಯಾನ್ ಮತ್ತು ಕುಲ್ಗಾಂ ಜಿಲ್ಲೆಗಳಲ್ಲಿ ಸೇಬು ತೋಟಗಳಿಗೆ ಅಪಾರ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕಾಶ್ಮೀರದಲ್ಲಿ ಶನಿವಾರ ಸುರಿದ ಭಾರಿ ಮಳೆ ಮತ್ತು ಹಿಮಪಾತ ಸಂಬಂಧಿತ ಅವಘಡಗಳಿಂದಾಗಿ ಮೂವರು ಮೃತಪಟ್ಟಿದ್ದಾರೆ. ಸೇಬು ತೋಟಗಳಿಗೆ ಅಪಾರ ಹಾನಿಯಾಗಿದೆ.</p>.<p>ಶ್ರೀನಗರದಲ್ಲಿ ಶನಿವಾರ ಅಕ್ಟೋಬರ್ ತಿಂಗಳ ಕನಿಷ್ಠ ತಾಪಮಾನ ದಾಖಲಾಗಿದೆ.</p>.<p>ಶುಕ್ರವಾರ ರಾತ್ರಿಯೇ ಮಳೆ ಹಾಗೂ ಹಿಮಪಾತ ಆರಂಭವಾಗಿತ್ತು. ಪುಲ್ವಾಮಾದ ಟ್ರಾಲ್ ಪ್ರದೇಶದ ನೂರ್ಪೊರಾದಲ್ಲಿ ಟೆಂಟೊಂದರ ಮೇಲೆ ಭೂಕುಸಿತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/state-name-for-jammu-kashmir-after-elections-amit-shah-878129.html" itemprop="url">ಚುನಾವಣೆ ಬಳಿಕ ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನ: ಅಮಿತ್ ಶಾ</a></p>.<p>ಗುಲ್ಮಾರ್ಗ್, ಸೋನಾಮಾರ್ಗ್, ಪಹಲ್ಗಾಂ, ಶೋಪಿಯಾನ್ ಹಾಗೂ ಗ್ರುಯೆಜ್ ಪ್ರದೇಶಗಳಲ್ಲಿ ಸಾಧಾರಣ ಹಿಮಪಾತವಾಗಿದೆ. ಮೀನಾಮಾರ್ಗ್, ಲಾಡಾಖ್ನ ದ್ರಾಸ್ ಪ್ರದೇಶಗಳಲ್ಲಿಯೂ ಶುಕ್ರವಾರದಿಂದ ಹಿಮಪಾತವಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>ದಕ್ಷಿಣ ಕಾಶ್ಮೀರದ ಶೋಪಿಯಾನ್ ಮತ್ತು ಕುಲ್ಗಾಂ ಜಿಲ್ಲೆಗಳಲ್ಲಿ ಸೇಬು ತೋಟಗಳಿಗೆ ಅಪಾರ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>