ವರಂಗಲ್: ನ್ಯಾಯಾಂಗ ಮೂಲಸೌಕರ್ಯ ನಿಗಮ ಸ್ಥಾಪನೆ, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜೀವನೋಪಾಯ ಕಳೆದುಕೊಂಡ ವಕೀಲರ ಕುಟುಂಬದವರಿಗೆ ಆರ್ಥಿಕ ನೆರವು ಮುಂತಾದ ವಿಷಯಗಳಿಗೆ ಕೇಂದ್ರ ಸರ್ಕಾರವು ಇನ್ನಷ್ಟೇ ಸ್ಪಂದಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಭಾನುವಾರ ಹೇಳಿದ್ದಾರೆ. ವರಂಗಲ್ನಲ್ಲಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.