<p class="title"><strong>ಕೋಯಿಕ್ಕೋಡ್(ಕೇರಳ):</strong> ಸೌರಫಲಕ ಹಗರಣದ ಸಂಬಂಧ, ಸರಿತಾ ನಾಯರ್ ಅವರಿಗೆ ಕೋಯಿಕ್ಕೋಡ್ನ ಕೋರ್ಟ್ ಆರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.</p>.<p class="title">ಕೇರಳ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಸರಿತಾ ನಾಯರ್ ಎರಡನೇ ಆರೋಪಿಯಾಗಿದ್ದಾರೆ.</p>.<p class="title">ನ್ಯಾಯಾಧೀಶ ಕೆ. ನಿಮ್ಮಿ ಪ್ರಕರಣದ ವಿಚಾರಣೆ ನಡೆಸಿದರು. ಮೂರನೇ ಆರೋಪಿ ಬಿ. ಮಣಿಮೊನ್ ಅವರನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಬಿಜು ರಾಧಾಕೃಷ್ಣ ಅವರಿಗೆ ಸಂಬಂಧಿಸಿ ತೀರ್ಪನ್ನು ತಡೆಹಿಡಿಯಲಾಗಿದೆ.</p>.<p>ಸರಿತಾ ನಾಯರ್ ಹಾಗೂ ಬಿಜು ರಾಧಾಕೃಷ್ಣನ್ ಅವರು, ಟೀಮ್ ಸೋಲಾರ್ ರಿನ್ಯೂಯೇಬಲ್ ಎನರ್ಜಿ ಸೊಲೂಷನ್ಸ್ ಕಂಪನಿ ಸ್ಥಾಪಿಸಿದ್ದರು. ಈ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವರಿಂದ ಹಣ ಪಡೆದು ವಂಚಿಸಿದ ಆರೋಪವಿದೆ. ಕೆಲವರಿಗೆ ಏಜೆನ್ಸಿ ಕೊಡುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.</p>.<p>ಸೌರಫಲಕ ಮಾರಾಟದ ಏಜೆನ್ಸಿ ಕೊಡುವುದಾಗಿ ಹೇಳಿ ತನ್ನಿಂದ ₹ 42.70 ಲಕ್ಷ ಪಡೆದು ಸರಿತಾ ಹಾಗೂ ಬಿಜು ವಂಚಿಸಿದ್ದಾರೆ ಎಂದು 2012ರಲ್ಲಿ ಕೋಯಿಕ್ಕೋಡ್ನ ಅಬ್ದುಲ್ ಮಜೀದ್ ಎಂಬುವವರು ದೂರು ನೀಡಿದ್ದರು. ನಂತರ 2018ರ ಜನವರಿ 25ಕ್ಕೆ ವಿಚಾರಣೆ ಆರಂಭವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಯಿಕ್ಕೋಡ್(ಕೇರಳ):</strong> ಸೌರಫಲಕ ಹಗರಣದ ಸಂಬಂಧ, ಸರಿತಾ ನಾಯರ್ ಅವರಿಗೆ ಕೋಯಿಕ್ಕೋಡ್ನ ಕೋರ್ಟ್ ಆರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.</p>.<p class="title">ಕೇರಳ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಸರಿತಾ ನಾಯರ್ ಎರಡನೇ ಆರೋಪಿಯಾಗಿದ್ದಾರೆ.</p>.<p class="title">ನ್ಯಾಯಾಧೀಶ ಕೆ. ನಿಮ್ಮಿ ಪ್ರಕರಣದ ವಿಚಾರಣೆ ನಡೆಸಿದರು. ಮೂರನೇ ಆರೋಪಿ ಬಿ. ಮಣಿಮೊನ್ ಅವರನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಬಿಜು ರಾಧಾಕೃಷ್ಣ ಅವರಿಗೆ ಸಂಬಂಧಿಸಿ ತೀರ್ಪನ್ನು ತಡೆಹಿಡಿಯಲಾಗಿದೆ.</p>.<p>ಸರಿತಾ ನಾಯರ್ ಹಾಗೂ ಬಿಜು ರಾಧಾಕೃಷ್ಣನ್ ಅವರು, ಟೀಮ್ ಸೋಲಾರ್ ರಿನ್ಯೂಯೇಬಲ್ ಎನರ್ಜಿ ಸೊಲೂಷನ್ಸ್ ಕಂಪನಿ ಸ್ಥಾಪಿಸಿದ್ದರು. ಈ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವರಿಂದ ಹಣ ಪಡೆದು ವಂಚಿಸಿದ ಆರೋಪವಿದೆ. ಕೆಲವರಿಗೆ ಏಜೆನ್ಸಿ ಕೊಡುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.</p>.<p>ಸೌರಫಲಕ ಮಾರಾಟದ ಏಜೆನ್ಸಿ ಕೊಡುವುದಾಗಿ ಹೇಳಿ ತನ್ನಿಂದ ₹ 42.70 ಲಕ್ಷ ಪಡೆದು ಸರಿತಾ ಹಾಗೂ ಬಿಜು ವಂಚಿಸಿದ್ದಾರೆ ಎಂದು 2012ರಲ್ಲಿ ಕೋಯಿಕ್ಕೋಡ್ನ ಅಬ್ದುಲ್ ಮಜೀದ್ ಎಂಬುವವರು ದೂರು ನೀಡಿದ್ದರು. ನಂತರ 2018ರ ಜನವರಿ 25ಕ್ಕೆ ವಿಚಾರಣೆ ಆರಂಭವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>