<p><strong>ಜಮ್ಮು</strong>: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಶನಿವಾರ ನೆಲಬಾಂಬ್ ಸ್ಫೋಟಗೊಂಡಿದೆ. </p>.<p>ಕೆರ್ನಿ ಸೆಕ್ಟರ್ನಲ್ಲಿ ಸೈನಿಕರ ಗುಂಪು ಬೆಳಿಗ್ಗೆ ಗಸ್ತು ತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ಲ್ಯಾನ್ಸ್ ನಾಯಕ್ ಅನ್ಶುಲ್ ರಾವತ್ ಎಂಬ ಯೋಧ ಗಾಯಗೊಂಡಿದ್ದಾರೆ. ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹೆಚ್ಚಿನ ಚಿಕಿತ್ಸೆಗಾಗಿ ಉಧಮ್ಪುರದಲ್ಲಿರುವ ಸೇನಾ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.</p>.<p>ಗಡಿಯಲ್ಲಿ ಒಳನುಸುಳುವಿಕೆ ತಡೆಯುವ ಭಾಗವಾಗಿ, ಕೆಲವು ಪ್ರದೇಶಗಳಲ್ಲಿ ನೆಲಬಾಂಬ್ಗಳನ್ನು ಅಳವಡಿಸಲಾಗುವುದು. ಕೆಲವೊಮ್ಮೆ ಈ ನೆಲೆಬಾಂಬ್ಗಳು ಮಳೆ ಕಾರಣ ನೀರಿನಲ್ಲಿ ಕೊಚ್ಚಿ ಹೋಗಿರುತ್ತದೆ. ಇದು ಈ ರೀತಿಯ ಅವಘಡಗಳಿಗೆ ಕಾರಣವಾಗುತ್ತದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದನ್ನು ಓದಿ: <a href="https://www.prajavani.net/india-news/dharmendra-pradhan-incharge-and-k-annamalai-appointed-as-co-incharge-by-bjp-1012356.html" itemprop="url">ಧರ್ಮೇಂದ್ರ ಪ್ರಧಾನ್ಗೆ ಉಸ್ತುವಾರಿ, ಅಣ್ಣಾಮಲೈಗೆ ಸಹ ಉಸ್ತುವಾರಿ ಕೊಟ್ಟ ಬಿಜೆಪಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಶನಿವಾರ ನೆಲಬಾಂಬ್ ಸ್ಫೋಟಗೊಂಡಿದೆ. </p>.<p>ಕೆರ್ನಿ ಸೆಕ್ಟರ್ನಲ್ಲಿ ಸೈನಿಕರ ಗುಂಪು ಬೆಳಿಗ್ಗೆ ಗಸ್ತು ತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ಲ್ಯಾನ್ಸ್ ನಾಯಕ್ ಅನ್ಶುಲ್ ರಾವತ್ ಎಂಬ ಯೋಧ ಗಾಯಗೊಂಡಿದ್ದಾರೆ. ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹೆಚ್ಚಿನ ಚಿಕಿತ್ಸೆಗಾಗಿ ಉಧಮ್ಪುರದಲ್ಲಿರುವ ಸೇನಾ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.</p>.<p>ಗಡಿಯಲ್ಲಿ ಒಳನುಸುಳುವಿಕೆ ತಡೆಯುವ ಭಾಗವಾಗಿ, ಕೆಲವು ಪ್ರದೇಶಗಳಲ್ಲಿ ನೆಲಬಾಂಬ್ಗಳನ್ನು ಅಳವಡಿಸಲಾಗುವುದು. ಕೆಲವೊಮ್ಮೆ ಈ ನೆಲೆಬಾಂಬ್ಗಳು ಮಳೆ ಕಾರಣ ನೀರಿನಲ್ಲಿ ಕೊಚ್ಚಿ ಹೋಗಿರುತ್ತದೆ. ಇದು ಈ ರೀತಿಯ ಅವಘಡಗಳಿಗೆ ಕಾರಣವಾಗುತ್ತದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದನ್ನು ಓದಿ: <a href="https://www.prajavani.net/india-news/dharmendra-pradhan-incharge-and-k-annamalai-appointed-as-co-incharge-by-bjp-1012356.html" itemprop="url">ಧರ್ಮೇಂದ್ರ ಪ್ರಧಾನ್ಗೆ ಉಸ್ತುವಾರಿ, ಅಣ್ಣಾಮಲೈಗೆ ಸಹ ಉಸ್ತುವಾರಿ ಕೊಟ್ಟ ಬಿಜೆಪಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>