ಜಮ್ಮು: ‘ಜಮ್ಮು–ಕಾಶ್ಮೀರದ ರಾಮಬನ್ ಜಿಲ್ಲೆಯ ಶಿಬಿರದಲ್ಲಿ ಸೇನಾ ಸಿಬ್ಬಂದಿಯೊಬ್ಬರುತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.
‘ಸಿಪಾಯಿ ಹನುಮಾನ್ ಚೌಧರಿ ಅವರು ಶನಿವಾರ ಮಧ್ಯರಾತ್ರಿ ಉಖ್ರಾಲ್ ಪ್ರದೇಶದಲ್ಲಿರುವ ಶಿಬಿರದಲ್ಲಿ ಈ ಕೃತ್ಯ ಎಸಗಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಈ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ’ ಎಂದು ಅವರು ಹೇಳಿದರು.