<p class="title"><strong>ಲಖನೌ:</strong> ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯೇ ಆರೋಪಿಯನ್ನು ಶಿಕ್ಷೆಗೆ ಗುರಿಪಡಿಸಲು ಏಕೈಕ ಪುರಾವೆಯಾಗಿ ಸಾಕಾಗಲಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p class="title">ನ್ಯಾಯಮೂರ್ತಿ ರಾಜೇಂದ್ರ ಕುಮಾರ್ ಅವರಿದ್ದ ಏಕ ಸದಸ್ಯ ಪೀಠವು, ನಾಲ್ಕು ವರ್ಷಗಳ ಕಠಿಣ ಸಜೆ ವಿಧಿಸಿದ್ದ ಕೆಳಹಂತದ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಮುಸ್ತಕೀಂ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಆದೇಶಿಸಿತು. ಅರ್ಜಿಯನ್ನು ವಜಾ ಮಾಡಿತು.</p>.<p class="title">ಈ ಪ್ರಕರಣ 1987ರಲ್ಲಿ ನಡೆದಿದ್ದು, ಆಗ ಸಂತ್ರಸ್ತೆಯ ವಯಸ್ಸು 9 ವರ್ಷ. ಸಹೋದರನ್ನು ಹುಡುಕುತ್ತಾ ಹೊರಹೋಗಿದ್ದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲು ಯತ್ನಿಸಿದ್ದರು.</p>.<p class="title">ವಿಚಾರಣೆ ವೇಳೆ ಸಂತ್ರಸ್ತೆಯು ಆರೋಪಿಯು ಕೈಹಿಡಿದು ಎಳೆದೊಯ್ದು ಅತ್ಯಾಚಾರ ಎಸಗಲು ಯತ್ನಿಸಿದ ಎಂದು ಸಾಕ್ಷ್ಯ ನುಡಿದಿದ್ದಳು. ಈ ಪ್ರಕರಣದಲ್ಲಿ ಸಂತ್ರಸ್ತೆಯು ಮೊದಲಿನಿಂದಲೂ ಹೇಳಿಕೆ ಕುರಿತಂತೆ ದೃಢವಾಗಿದ್ದಾಳೆ. ಇದನ್ನೇ ಏಕೈಕ ಸಾಕ್ಷ್ಯವಾಗಿ ಪರಿಗಣಿಸಬೇಕು ಎಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong> ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯೇ ಆರೋಪಿಯನ್ನು ಶಿಕ್ಷೆಗೆ ಗುರಿಪಡಿಸಲು ಏಕೈಕ ಪುರಾವೆಯಾಗಿ ಸಾಕಾಗಲಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p class="title">ನ್ಯಾಯಮೂರ್ತಿ ರಾಜೇಂದ್ರ ಕುಮಾರ್ ಅವರಿದ್ದ ಏಕ ಸದಸ್ಯ ಪೀಠವು, ನಾಲ್ಕು ವರ್ಷಗಳ ಕಠಿಣ ಸಜೆ ವಿಧಿಸಿದ್ದ ಕೆಳಹಂತದ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಮುಸ್ತಕೀಂ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಆದೇಶಿಸಿತು. ಅರ್ಜಿಯನ್ನು ವಜಾ ಮಾಡಿತು.</p>.<p class="title">ಈ ಪ್ರಕರಣ 1987ರಲ್ಲಿ ನಡೆದಿದ್ದು, ಆಗ ಸಂತ್ರಸ್ತೆಯ ವಯಸ್ಸು 9 ವರ್ಷ. ಸಹೋದರನ್ನು ಹುಡುಕುತ್ತಾ ಹೊರಹೋಗಿದ್ದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲು ಯತ್ನಿಸಿದ್ದರು.</p>.<p class="title">ವಿಚಾರಣೆ ವೇಳೆ ಸಂತ್ರಸ್ತೆಯು ಆರೋಪಿಯು ಕೈಹಿಡಿದು ಎಳೆದೊಯ್ದು ಅತ್ಯಾಚಾರ ಎಸಗಲು ಯತ್ನಿಸಿದ ಎಂದು ಸಾಕ್ಷ್ಯ ನುಡಿದಿದ್ದಳು. ಈ ಪ್ರಕರಣದಲ್ಲಿ ಸಂತ್ರಸ್ತೆಯು ಮೊದಲಿನಿಂದಲೂ ಹೇಳಿಕೆ ಕುರಿತಂತೆ ದೃಢವಾಗಿದ್ದಾಳೆ. ಇದನ್ನೇ ಏಕೈಕ ಸಾಕ್ಷ್ಯವಾಗಿ ಪರಿಗಣಿಸಬೇಕು ಎಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>