ವಿಶ್ವದ ಅನೇಕ ರಾಷ್ಟ್ರಗಳು ಭಾರತವನ್ನು ಗೌರವಿಸುತ್ತವೆ. ಕೆಲ ಶಕ್ತಿಗಳಿಗೆ, ಸ್ವಾವಲಂಬನೆ ಆಧರಿಸಿದ ಭಾರತೀಯತೆಯ ಪುನರುತ್ಥಾನ ಸಹಿಸಲಾಗುತ್ತಿಲ್ಲ. ಇಂಥ ಶಕ್ತಿಗಳೇ ದೇಶದ ಒಳಗೆ ಮತ್ತು ಹೊರಗಡೆ ಹಿಂದುತ್ವದ ಚಿಂತನೆಯನ್ನು ವಿರೋಧಿಸುತ್ತಿವೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿವೆ. ಇವುಗಳ ವಿರುದ್ಧ ಜಾಗೃತಿ ಅಗತ್ಯ ಎಂದು ಹೇಳಲಾಗಿದೆ.