ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲವು ಮುಸ್ಲಿಂಮರಿಗೆ ದೇಶದ ವಿಜ್ಞಾನಿಗಳ ಬಗ್ಗೆ ನಂಬಿಕೆಯಿಲ್ಲ: ಬಿಜೆಪಿ ಶಾಸಕ

Last Updated 14 ಜನವರಿ 2021, 12:02 IST
ಅಕ್ಷರ ಗಾತ್ರ

ನವದೆಹಲಿ: ಕೆಲವು ಮುಸ್ಲಿಂಮರಿಗೆ ದೇಶದ ವಿಜ್ಞಾನಿಗಳ ಬಗ್ಗೆ ನಂಬಿಕೆಯಿಲ್ಲ ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಸಂಗೀತ್ ಸೋಮ್ ಆರೋಪಿಸಿದ್ದಾರೆ.

ಕೋವಿಡ್-19 ಲಸಿಕೆ ಸಂಬಂಧ ವಿರೋಧ ಪಕ್ಷಗಳಿಂದ ಎದುರಾಗಿರುವ ಆರೋಪಕ್ಕೆ ಪ್ರತಿಯಾಗಿ ಬಿಜೆಪಿ ಶಾಸಕರಾದ ಸಂಗೀತ್ ಸೋಮ್ ಈ ರೀತಿಯಾದ ಪ್ರತಿಕ್ರಿಯೆ ನೀಡಿದ್ದಾರೆ.

ದುರದೃಷ್ಟವಶಾತ್ ಕೆಲವು ಮುಸ್ಲಿಂಮರಿಗೆ ದೇಶದ ವಿಜ್ಞಾನಿಗಳು ಮತ್ತು ಪೊಲೀಸರ ಮೇಲೆ ನಂಬಿಕೆಯಿಲ್ಲ. ಅವರಿಗೆ ಪ್ರಧಾನ ಮಂತ್ರಿಯಲ್ಲೂ ನಂಬಿಕೆಯಿಲ್ಲ. ಅವರಿಗೆ ಪಾಕಿಸ್ತಾನದ ಮೇಲೆ ನಂಬಿಕೆಯಿದೆ. ಅವರು ಅಲ್ಲಿಗೆ ಹೋಗಬಹುದು. ಆದರೆ ವಿಜ್ಞಾನಿಗಳ ಬಗ್ಗೆ ಅನುಮಾನಪಡುತ್ತಾರೆ ಎಂದು ಸಂಗೀತ್ ಸೋಮ್ ಆರೋಪಿಸಿದರು.

ಏತನ್ಮಧ್ಯೆ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ ಎಂದು ದೂರಿದರು. ಅಲ್ಲಿ ಧರಣಿ ನಡೆಸುತ್ತಿರುವವರು ರೈತರಲ್ಲ. ಬದಲಿಗೆ ರೈತ ವಿರೋಧಿಗಳು ಎಂದು ಹೇಳಿದರು.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸಂಗೀತ್ ಸೋಮ್, ಅವರ ಆಡಳಿತದಲ್ಲಿ ಉತ್ತರ ಪ್ರದೇಶವು ಮೊಘಲ್ ಸುಲ್ತಾನವಾಗಿ ಮಾರ್ಪಾಟ್ಟಿತ್ತು. ಅವರು ಮೊಘಲ್ ಆಳ್ವಿಕೆಯ ಕೊನೆಯ ರಾಜನಾಗಿದ್ದು, ಮಗದೊಂದು ಅವಕಾಶ ಸಿಗಲಾರದು ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT