ಜಾಮೀನು ಅರ್ಜಿಗಳನ್ನು ಪರಿಗಣಿಸುವಾಗ ಪಾಲಿಸಬೇಕಿರುವ ಮಾರ್ಗಸೂಚಿಗಳ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ, ‘ಪ್ರಕರಣವೊಂದರಲ್ಲಿ ಬಂಧಿತನಾಗಿ ಸುದೀರ್ಘ ಅವಧಿವರೆಗೆ ಜೈಲಿನಲ್ಲಿರುವ ಅಥವಾ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಅಪರಾಧಿಗಳನ್ನು ಸನ್ನಡತೆ ಇಲ್ಲವೇ ಶಿಕ್ಷೆಯ ಅವಧಿ ಪೂರ್ಣಗೊಳಿಸಿರುವ ಮಾನದಂಡದ ಆಧಾರದಲ್ಲಿ ಬಿಡುಗಡೆಗೊಳಿಸಲು ಇರುವ ಮಾರ್ಗೋಪಾಯಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಈ ಹಿಂದೆ ಸೂಚಿಸಲಾಗಿತ್ತು. ಈ ವಿಚಾರವಾಗಿ ಏನಾದರೂ ಚರ್ಚೆಗಳು ನಡೆದಿವೆಯೇ? ಏನಾದರೂ ಬೆಳವಣಿಗೆ ಆಗಿದೆಯೇ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರನ್ನು ಪ್ರಶ್ನಿಸಿತು.