<p><strong>ಕೋಲ್ಕತ್ತ:</strong> ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೇಲೆ ರಾಜಕೀಯ ಸೇರುವ ಒತ್ತಡ ಹೇರಲಾಗಿತ್ತು ಎಂದು ಮಾಜಿ ಸಚಿವ ಹಾಗೂ ಸಿಪಿಐ(ಎಂ) ಹಿರಿಯ ಮುಖಂಡ ಅಶೋಕ್ ಭಟ್ಟಾಚಾರ್ಯ ಹೇಳಿಕೆಯು ಪಶ್ಚಿಮ ಬಂಗಾಳದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ.</p>.<p>ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಶನಿವಾರದಂದು ಲಘು ಹೃದಯಾಘಾತಕ್ಕೊಳಗಾಗಿದ್ದರು. ಕೋಲ್ಕತ್ತದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ್ಯಂಜಿಯೊಪ್ಲಾಸ್ಟಿಗೆ ಒಳಗಾಗಿದ್ದರು.</p>.<p>ದಾದಾ ಈ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಾಗಳು ಹಬ್ಬಿದ್ದವು. ಆದರೆ ರಾಜಕೀಯ ಪ್ರವೇಶ ಬಗ್ಗೆ ಗಂಗೂಲಿ ಎಲ್ಲೂ ಪ್ರತಿಕ್ರಿಯಿಸಿಲ್ಲ.</p>.<p>ಕೆಲವರು ಗಂಗೂಲಿ ಅವರನ್ನು ರಾಜಕೀಯವಾಗಿ ಬಳಸಬೇಕೆಂದು ಬಯಸಿದ್ದರು. ಅದು ಅವರ ಮೇಲೆ ಒತ್ತಡ ಹೇರಿದೆ. ಅವರು ರಾಜಕೀಯ ಅಂಶವಲ್ಲ. ಸೌರವ್ ಗಂಗೂಲಿ ಕ್ರೀಡಾ ಐಕಾನ್ ಆಗಿಯೇ ಗುರುತಿಸಬೇಕು ಎಂದು ಸೌರವ್ ಗಂಗೂಲಿ ಕುಟುಂಬದ ಸ್ನೇಹಿತರೂ ಆಗಿರುವ ಅಶೋಕ್ ಭಟ್ಟಾಚಾರ್ಯ ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/ganguly-stable-decision-on-further-angioplasty-soon-792936.html" itemprop="url">ಗಂಗೂಲಿ ಆರೋಗ್ಯ ಸ್ಥಿರ: ಅಗತ್ಯಬಿದ್ದರೆ ಮತ್ತೊಂದು ಆ್ಯಂಜಿಯೊಪ್ಲಾಸ್ಟಿ –ವೈದ್ಯರು </a></p>.<p>ರಾಜಕೀಯಕ್ಕೆ ಸೇರಲು ನಾವು ಅವರ ಮೇಲೆ ಒತ್ತಡವನ್ನು ಹೇರಬಾರದು. ಕಳೆದ ವಾರ ಸೌರವ್ ಗಂಗೂಲಿ ಅವರಲ್ಲಿ ನಾನು ರಾಜಕೀಯಕ್ಕೆ ಸೇರಬಾರದು ಎಂದು ಹೇಳಿದ್ದೆ. ಅವರದನ್ನು ವಿರೋಧಿಸಲಿಲ್ಲ ಎಂದು ದಾದಾ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಬಳಿಕ ಭಟ್ಟಾಚಾರ್ಯ ತಿಳಿಸಿದರು.</p>.<p>ಮಾಜಿ ಸಚಿವರ ಅಭಿಪ್ರಾಯಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್,ಕೆಲವರು ಕೆಟ್ಟ ಮನಸ್ಥಿತಿಯಿಂದಾಗಿ ಎಲ್ಲದರಲ್ಲೂ ರಾಜಕೀಯವನ್ನು ಹುಡುಕುತ್ತಾರೆ. ಲಕ್ಷಾಂತರ ಅಭಿಮಾನಿಗಳಂತೆಯೇ ಸೌರವ್ ಗಂಗೂಲಿ ಬೇಗನೇ ಚೇತರಿಸಿಕೊಳ್ಳಲಿ ಎಂಬುದನ್ನು ನಾವು ಬಯಸುತ್ತಿದ್ದೇವೆ ಎಂದು ಹೇಳಿದರು.</p>.<p>ತೃಣಮೂಲ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಚಿವ ಶೋಭನ್ದೇಬ್ ಚಟರ್ಜಿ ಸಹ ಗಂಗೂಲಿ ಅವರನ್ನು ಆಸ್ಪತ್ರೆಯಲ್ಲಿ ಸಂದರ್ಶನ ಮಾಡಿದ ಬಳಿಕ ದಾದಾ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸುವ ಯಾವುದೇ ಪ್ರಯತ್ನಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೇಲೆ ರಾಜಕೀಯ ಸೇರುವ ಒತ್ತಡ ಹೇರಲಾಗಿತ್ತು ಎಂದು ಮಾಜಿ ಸಚಿವ ಹಾಗೂ ಸಿಪಿಐ(ಎಂ) ಹಿರಿಯ ಮುಖಂಡ ಅಶೋಕ್ ಭಟ್ಟಾಚಾರ್ಯ ಹೇಳಿಕೆಯು ಪಶ್ಚಿಮ ಬಂಗಾಳದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ.</p>.<p>ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಶನಿವಾರದಂದು ಲಘು ಹೃದಯಾಘಾತಕ್ಕೊಳಗಾಗಿದ್ದರು. ಕೋಲ್ಕತ್ತದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ್ಯಂಜಿಯೊಪ್ಲಾಸ್ಟಿಗೆ ಒಳಗಾಗಿದ್ದರು.</p>.<p>ದಾದಾ ಈ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಾಗಳು ಹಬ್ಬಿದ್ದವು. ಆದರೆ ರಾಜಕೀಯ ಪ್ರವೇಶ ಬಗ್ಗೆ ಗಂಗೂಲಿ ಎಲ್ಲೂ ಪ್ರತಿಕ್ರಿಯಿಸಿಲ್ಲ.</p>.<p>ಕೆಲವರು ಗಂಗೂಲಿ ಅವರನ್ನು ರಾಜಕೀಯವಾಗಿ ಬಳಸಬೇಕೆಂದು ಬಯಸಿದ್ದರು. ಅದು ಅವರ ಮೇಲೆ ಒತ್ತಡ ಹೇರಿದೆ. ಅವರು ರಾಜಕೀಯ ಅಂಶವಲ್ಲ. ಸೌರವ್ ಗಂಗೂಲಿ ಕ್ರೀಡಾ ಐಕಾನ್ ಆಗಿಯೇ ಗುರುತಿಸಬೇಕು ಎಂದು ಸೌರವ್ ಗಂಗೂಲಿ ಕುಟುಂಬದ ಸ್ನೇಹಿತರೂ ಆಗಿರುವ ಅಶೋಕ್ ಭಟ್ಟಾಚಾರ್ಯ ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/ganguly-stable-decision-on-further-angioplasty-soon-792936.html" itemprop="url">ಗಂಗೂಲಿ ಆರೋಗ್ಯ ಸ್ಥಿರ: ಅಗತ್ಯಬಿದ್ದರೆ ಮತ್ತೊಂದು ಆ್ಯಂಜಿಯೊಪ್ಲಾಸ್ಟಿ –ವೈದ್ಯರು </a></p>.<p>ರಾಜಕೀಯಕ್ಕೆ ಸೇರಲು ನಾವು ಅವರ ಮೇಲೆ ಒತ್ತಡವನ್ನು ಹೇರಬಾರದು. ಕಳೆದ ವಾರ ಸೌರವ್ ಗಂಗೂಲಿ ಅವರಲ್ಲಿ ನಾನು ರಾಜಕೀಯಕ್ಕೆ ಸೇರಬಾರದು ಎಂದು ಹೇಳಿದ್ದೆ. ಅವರದನ್ನು ವಿರೋಧಿಸಲಿಲ್ಲ ಎಂದು ದಾದಾ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಬಳಿಕ ಭಟ್ಟಾಚಾರ್ಯ ತಿಳಿಸಿದರು.</p>.<p>ಮಾಜಿ ಸಚಿವರ ಅಭಿಪ್ರಾಯಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್,ಕೆಲವರು ಕೆಟ್ಟ ಮನಸ್ಥಿತಿಯಿಂದಾಗಿ ಎಲ್ಲದರಲ್ಲೂ ರಾಜಕೀಯವನ್ನು ಹುಡುಕುತ್ತಾರೆ. ಲಕ್ಷಾಂತರ ಅಭಿಮಾನಿಗಳಂತೆಯೇ ಸೌರವ್ ಗಂಗೂಲಿ ಬೇಗನೇ ಚೇತರಿಸಿಕೊಳ್ಳಲಿ ಎಂಬುದನ್ನು ನಾವು ಬಯಸುತ್ತಿದ್ದೇವೆ ಎಂದು ಹೇಳಿದರು.</p>.<p>ತೃಣಮೂಲ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಚಿವ ಶೋಭನ್ದೇಬ್ ಚಟರ್ಜಿ ಸಹ ಗಂಗೂಲಿ ಅವರನ್ನು ಆಸ್ಪತ್ರೆಯಲ್ಲಿ ಸಂದರ್ಶನ ಮಾಡಿದ ಬಳಿಕ ದಾದಾ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸುವ ಯಾವುದೇ ಪ್ರಯತ್ನಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>