<p><strong>ಮುಂಬೈ:</strong> ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನವನ್ನು ಜಪ್ತಿ ಮಾಡಿರುವ ಪ್ರಕರಣದ ತನಿಖೆಯನ್ನು ಸೋಮವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕೈಗೆತ್ತಿಕೊಂಡಿದೆ.</p>.<p>ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಎನ್ಐಎ ಈ ಪ್ರಕರಣ ವನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತನಿಖಾ ಸಂಸ್ಥೆಯ ವಕ್ತಾರರು ಸೋಮವಾರ ತಿಳಿಸಿದರು.</p>.<p>ಈ ಬೆಳವಣಿಗೆಯು ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರದ ಹುಬ್ಬೇರುವಂತೆ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ 'ಈ ಪ್ರಕರಣದಲ್ಲಿ ಏನೋ ಇದೆ. ಆದ್ದರಿಂದಲೇ ಎನ್ಐಎ ತನಿಖೆಯನ್ನು ವಹಿಸಿಕೊಂಡಿದೆ. ಅದೇನೆಂದು ನಾವು ಖಚಿತವಾಗಿ ಬಯಲಿಗೆಳೆಯುತ್ತೇವೆ. ವಿರೋಧ ಪಕ್ಷಕ್ಕೆ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ,' ಎಂದು ಹೇಳಿದರು.</p>.<p>ಎಸ್ಯುವಿ ಪತ್ತೆಯಾದ ಪ್ರಕರಣವನ್ನು ಎನ್ಐಎ ವಹಿಸಿಕೊಂಡಿದ್ದರೂ, ಎಸ್ಯುವಿ ಒಡೆತನ ಹೊಂದಿರುವ ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೆನ್ ಸಾವಿನ ಬಗ್ಗೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತನಿಖೆ ಮುಂದುವರಿಸಲಿದೆ ಎಂದು ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/man-whose-explosive-laden-suv-was-found-near-mukesh-ambanis-home-found-dead-810765.html" target="_blank"><strong> </strong>ಅಂಬಾನಿ ನಿವಾಸದ ಬಳಿ ಸ್ಫೋಟಕ ಪ್ರಕರಣ: ಎಸ್ಯುವಿ ಮಾಲೀಕನ ಮೃತದೇಹ ಪತ್ತೆ</a></p>.<p>ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿಯ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರವೂ 'ಸ್ಕಾರ್ಪಿಯೊ' ಪ್ರಕರಣವನ್ನು ಭಯೋತ್ಪಾದನ ನಿಗ್ರಹ ಪಡೆ (ಎಟಿಎಸ್)ಗೆ ವಹಿಸಿತ್ತು. ಅದರ ಮರುದಿನವೇ ಪ್ರಕರಣವನ್ನು ಎನ್ಐಎ ಕೈಗೆತ್ತಿಕೊಂಡಿದೆ.</p>.<p>ಫೆಬ್ರುವರಿ 25ರಂದು ಮುಂಬೈನ ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸದ ಸಮೀಪ 20 ಜಿಲೆಟಿನ್ ಕಡ್ಡಿಗಳಿದ್ದ ಸ್ಕಾರ್ಪಿಯೊ ವಾಹನ ಪತ್ತೆಯಾಗಿತ್ತು. ಪೊಲೀಸರು ಅದನ್ನು ಜಪ್ತಿ ಮಾಡಿದ್ದರು. </p>.<p><strong>ಸಂಸದ ಮೋಹನ್ ಡೆಲ್ಕರ್ ಪ್ರಕರಣದ ಆಳ ತನಿಖೆ: ಠಾಕ್ರೆ</strong></p>.<p>ಹಲವರ ಹೆಸರುಗಳನ್ನು ಉಲ್ಲೇಖಿಸಿ, ಅನುಮಾನಾಸ್ಪದವಾಗಿ ಮೃತಪಟ್ಟಿರುವ ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ಡೆಲ್ಕರ್ ಅವರ ಆತ್ಮಹತ್ಯೆ ಬಗ್ಗೆ ಆಳವಾದ ತನಿಖೆ ನಡೆಸುವುದಾಗಿಯೂ, ತಪ್ಪಿತಸ್ಥರನ್ನು ದಂಡಿಸುವುದಾಗಿಯೂ ಠಾಕ್ರೆ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/mohan-delkar-found-dead-807739.html" target="_blank">ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ಡೇಲ್ಕರ್ ಶಂಕಾಸ್ಪದ ಸಾವು, ಶವ ಪತ್ತೆ</a></p>.<p>ಸಂಸದ ಮೋಹನ್ ಡೇಲ್ಕರ್ (58) ಅವರ ಶವ ಮಾ.1ರಂದು ದಕ್ಷಿಣ ಮುಂಬೈನ ಮರಿನಾ ಡ್ರೈವ್ ಹೋಟೆಲ್ನಲ್ಲಿ ಪತ್ತೆಯಾಗಿತ್ತು. ಅವರ ಸಾವಿನ ಕುರಿತು ಹಲವು ಅನುಮಾನಗಳು ಎದ್ದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನವನ್ನು ಜಪ್ತಿ ಮಾಡಿರುವ ಪ್ರಕರಣದ ತನಿಖೆಯನ್ನು ಸೋಮವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕೈಗೆತ್ತಿಕೊಂಡಿದೆ.</p>.<p>ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಎನ್ಐಎ ಈ ಪ್ರಕರಣ ವನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತನಿಖಾ ಸಂಸ್ಥೆಯ ವಕ್ತಾರರು ಸೋಮವಾರ ತಿಳಿಸಿದರು.</p>.<p>ಈ ಬೆಳವಣಿಗೆಯು ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರದ ಹುಬ್ಬೇರುವಂತೆ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ 'ಈ ಪ್ರಕರಣದಲ್ಲಿ ಏನೋ ಇದೆ. ಆದ್ದರಿಂದಲೇ ಎನ್ಐಎ ತನಿಖೆಯನ್ನು ವಹಿಸಿಕೊಂಡಿದೆ. ಅದೇನೆಂದು ನಾವು ಖಚಿತವಾಗಿ ಬಯಲಿಗೆಳೆಯುತ್ತೇವೆ. ವಿರೋಧ ಪಕ್ಷಕ್ಕೆ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ,' ಎಂದು ಹೇಳಿದರು.</p>.<p>ಎಸ್ಯುವಿ ಪತ್ತೆಯಾದ ಪ್ರಕರಣವನ್ನು ಎನ್ಐಎ ವಹಿಸಿಕೊಂಡಿದ್ದರೂ, ಎಸ್ಯುವಿ ಒಡೆತನ ಹೊಂದಿರುವ ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೆನ್ ಸಾವಿನ ಬಗ್ಗೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತನಿಖೆ ಮುಂದುವರಿಸಲಿದೆ ಎಂದು ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/man-whose-explosive-laden-suv-was-found-near-mukesh-ambanis-home-found-dead-810765.html" target="_blank"><strong> </strong>ಅಂಬಾನಿ ನಿವಾಸದ ಬಳಿ ಸ್ಫೋಟಕ ಪ್ರಕರಣ: ಎಸ್ಯುವಿ ಮಾಲೀಕನ ಮೃತದೇಹ ಪತ್ತೆ</a></p>.<p>ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿಯ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರವೂ 'ಸ್ಕಾರ್ಪಿಯೊ' ಪ್ರಕರಣವನ್ನು ಭಯೋತ್ಪಾದನ ನಿಗ್ರಹ ಪಡೆ (ಎಟಿಎಸ್)ಗೆ ವಹಿಸಿತ್ತು. ಅದರ ಮರುದಿನವೇ ಪ್ರಕರಣವನ್ನು ಎನ್ಐಎ ಕೈಗೆತ್ತಿಕೊಂಡಿದೆ.</p>.<p>ಫೆಬ್ರುವರಿ 25ರಂದು ಮುಂಬೈನ ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸದ ಸಮೀಪ 20 ಜಿಲೆಟಿನ್ ಕಡ್ಡಿಗಳಿದ್ದ ಸ್ಕಾರ್ಪಿಯೊ ವಾಹನ ಪತ್ತೆಯಾಗಿತ್ತು. ಪೊಲೀಸರು ಅದನ್ನು ಜಪ್ತಿ ಮಾಡಿದ್ದರು. </p>.<p><strong>ಸಂಸದ ಮೋಹನ್ ಡೆಲ್ಕರ್ ಪ್ರಕರಣದ ಆಳ ತನಿಖೆ: ಠಾಕ್ರೆ</strong></p>.<p>ಹಲವರ ಹೆಸರುಗಳನ್ನು ಉಲ್ಲೇಖಿಸಿ, ಅನುಮಾನಾಸ್ಪದವಾಗಿ ಮೃತಪಟ್ಟಿರುವ ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ಡೆಲ್ಕರ್ ಅವರ ಆತ್ಮಹತ್ಯೆ ಬಗ್ಗೆ ಆಳವಾದ ತನಿಖೆ ನಡೆಸುವುದಾಗಿಯೂ, ತಪ್ಪಿತಸ್ಥರನ್ನು ದಂಡಿಸುವುದಾಗಿಯೂ ಠಾಕ್ರೆ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/mohan-delkar-found-dead-807739.html" target="_blank">ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ಡೇಲ್ಕರ್ ಶಂಕಾಸ್ಪದ ಸಾವು, ಶವ ಪತ್ತೆ</a></p>.<p>ಸಂಸದ ಮೋಹನ್ ಡೇಲ್ಕರ್ (58) ಅವರ ಶವ ಮಾ.1ರಂದು ದಕ್ಷಿಣ ಮುಂಬೈನ ಮರಿನಾ ಡ್ರೈವ್ ಹೋಟೆಲ್ನಲ್ಲಿ ಪತ್ತೆಯಾಗಿತ್ತು. ಅವರ ಸಾವಿನ ಕುರಿತು ಹಲವು ಅನುಮಾನಗಳು ಎದ್ದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>