ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಗೆ ಗೈರು | AAP ನಾಯಕ ಸೋಮನಾಥ ಭಾರ್ತಿಗೆ ನ್ಯಾಯಾಲಯದಿಂದ ಎಚ್ಚರಿಕೆ

Last Updated 11 ನವೆಂಬರ್ 2022, 13:15 IST
ಅಕ್ಷರ ಗಾತ್ರ

ಸುಲ್ತಾನ್‌ಪುರ: ವಿಚಾರಣೆಗೆ ಹಾಜರಾಗದಿದ್ದಕ್ಕಾಗಿ ಎಎಪಿ ನಾಯಕ, ದೆಹಲಿ ಮಾಜಿ ಸಚಿವ ಸೋಮನಾಥ್‌ ಭಾರ್ತಿ ಅವರಿಗೆ ಇಲ್ಲಿಯ ಸ್ಥಳೀಯ ನ್ಯಾಯಾಲಯವೊಂದು ಎಚ್ಚರಿಕೆ ನೀಡಿದೆಎಂದು ವಕೀಲರೊಬ್ಬರು ತಿಳಿಸಿದ್ದಾರೆ.

2021ರ ಜನವರಿಯಲ್ಲಿ ಉತ್ತರ ಪ್ರದೇಶ ಪ್ರವಾಸದಲ್ಲಿದ್ದ ಭಾರ್ತಿ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಕ್ಕಳ ಕುರಿತು ಅಸಭ್ಯ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಜಗದೀಶ್‌ಪುರದ ನಿವಾಸಿ ಸೋಮನಾಥ್‌ ಸಾಹು ಎಂಬುವವರು ದೂರು ದಾಖಲಿಸಿದ್ದರು ವಕೀಲ ಕಾಳಿಕಾ ಪ್ರಸಾದ್‌ ಮಿಶ್ರಾ ಅವರು ಹೇಳಿದ್ದಾರೆ.

ಗುರುವಾರ ನ್ಯಾಯಾಲಯಕ್ಕೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿತ್ತು. ಆದರೆ ಅವರು ಗೈರಾಗಿದ್ದರು. ಈ ಮೊಕದ್ದಮೆಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ನವೆಂಬರ್‌ 17ಕ್ಕೆ ನಿಗದಿಪಡಿಸಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT