ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 31ನೇ ಪುಣ್ಯತಿಥಿ. ಈ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ’ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಸೋನಿಯಾ ಅವರ ಜೊತೆಯಲ್ಲಿ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ, ಅಳಿಯ ರಾಬರ್ಟ್ ವಾದ್ರಾ ಅವರು ಉಪಸ್ಥಿತರಿದ್ದರು.
ಕಾಂಗ್ರೆಸ್ ನಾಯಕರಾದ ಪಿ. ಚಿದಂಬರಂ, ಸಚಿನ್ ಪೈಲೆಟ್ ಸೇರಿದಂತೆ ಅನೇಕ ಸ್ಮಾರಕಕ್ಕೆ ಭೇಟಿ ಪುಷ್ಪ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್ ಗಾಂಧಿ ಅಧಿಕಾರ ವಹಿಸಿಕೊಂಡರು. 1984 ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು. ಅತ್ಯಂತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದರು. 1991ರ ಮೇ 21ರಂದು ರಾಜೀವ್ ಗಾಂಧಿ ಹತ್ಯೆಗೀಡಾದರು.
ಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಅಪರಾಧಿ ಎ.ಜಿ.ಪೇರರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬುಧವಾರ ಬಿಡುಗಡೆ ಮಾಡಲಾಗಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಮಂದಿ ಅಪರಾಧಿಗಳಲ್ಲಿ ಪೇರರಿವಾಳನ್ ಒಬ್ಬರಾಗಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ರಾಜೀವ್ ಗಾಂಧಿ ಹತ್ಯೆ ಪ್ರಕರಣದಡಿ ಎ.ಜಿ ಪೇರರಿವಾಳನ್ ಅವರನ್ನು 1991ರ ಜೂನ್ 19ರಂದು ಬಂಧಿಸಲಾಗಿತ್ತು.
Congress interim president Sonia Gandhi and Priyanka Gandhi pay homage to former Prime Minister Rajiv Gandhi on his 31st death anniversary at Vir Bhumi in Delhi. pic.twitter.com/3NVwviAQAr
— ANI (@ANI) May 21, 2022
Congress leaders P Chidambaram and Sachin Pilot pay homage to former Prime Minister Rajiv Gandhi on his 31st death anniversary at Vir Bhumi in Delhi. pic.twitter.com/QroHD2mALv
— ANI (@ANI) May 21, 2022
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.