ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, 'ಕೇಂದ್ರದ ಕೃಷಿ ಕಾನೂನುಗಳ ಮೇಲೆ ನಿರ್ಬಂಧ ಹೇರುವ ಸಾಧ್ಯತೆಗಳ ಬಗ್ಗೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಅನ್ವೇಷಿಸಬೇಕು. ಸಂವಿಧಾನದ 254 (2) ನೇ ವಿಧಿ ಅನ್ವಯ ಕ್ರಮ ಕೈಗೊಳ್ಳಲು ಮುಂದಾಗಬೇಕು. ಈ ವಿಧಿಯು ಕೇಂದ್ರ ಸರ್ಕಾರದ ಕಾನೂನಿನ ಮೇಲೆ ನಿಯಂತ್ರಣ ಹೊಂದಲು ರಾಜ್ಯ ಶಾಸಕಾಂಗಗಳಿಗೆ ಅನುವು ಮಾಡಿಕೊಡುತ್ತದೆ ಎಂಬುದಾಗಿ ಕಾಂಗ್ರೆಸ್ ಅಧ್ಯಕ್ಷೆ ತಿಳಿಸಿದ್ದಾರೆ' ಎಂದು ಅವರು ಹೇಳಿದ್ದಾರೆ.