<p><strong>ನವದೆಹಲಿ:</strong> ಇತ್ತೀಚೆಗೆ ಮುಕ್ತಾಯಗೊಂಡ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಬಹಳ ನಿರಾಶಾದಾಯಕವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿಪ್ರಾಯಪಟ್ಟರು.</p>.<p>ಪಕ್ಷದ ಎಲ್ಲ ಸಂಸದರೊಂದಿಗೆ ಶುಕ್ರವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿನ ಹಿನ್ನಡೆಯಿಂದ ಪಕ್ಷದ ಸದಸ್ಯರು ನಮ್ರತೆ ಮತ್ತು ಪ್ರಾಮಾಣಿಕ ಮನೋಭಾವದಿಂದ ಪಾಠ ಕಲಿಯಬೇಕು‘ ಎಂದು ಅವರು ಹೇಳಿದ್ದಾರೆ.</p>.<p>‘ವಿಧಾನಸಭಾ ಚುನಾವಣಾ ಫಲಿತಾಂಶಗಳ ಪರಾಮರ್ಶೆಗೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಸೇರಲಿದೆ‘ ಎಂದು ಅವರು ತಿಳಿಸಿದರು.</p>.<p>ಇದೇ ವೇಳೆ ಸಭೆಯಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣೆಯಲ್ಲಿ ಜಯಗಳಿಸಿದ ಮಮತಾ ಬ್ಯಾನರ್ಜಿ, ಎಂ. ಕೆ.ಸ್ಟಾಲಿನ್ ಮತ್ತು ಎಡಪಕ್ಷಗಳನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/oxygen-crisix-supreme-court-refuses-to-stay-karnataka-hc-order-on-more-oxygen-to-state-828651.html" target="_blank"> ರಾಜ್ಯಕ್ಕೆ 1,200 ಟನ್ ಆಮ್ಲಜನಕ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇತ್ತೀಚೆಗೆ ಮುಕ್ತಾಯಗೊಂಡ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಬಹಳ ನಿರಾಶಾದಾಯಕವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿಪ್ರಾಯಪಟ್ಟರು.</p>.<p>ಪಕ್ಷದ ಎಲ್ಲ ಸಂಸದರೊಂದಿಗೆ ಶುಕ್ರವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿನ ಹಿನ್ನಡೆಯಿಂದ ಪಕ್ಷದ ಸದಸ್ಯರು ನಮ್ರತೆ ಮತ್ತು ಪ್ರಾಮಾಣಿಕ ಮನೋಭಾವದಿಂದ ಪಾಠ ಕಲಿಯಬೇಕು‘ ಎಂದು ಅವರು ಹೇಳಿದ್ದಾರೆ.</p>.<p>‘ವಿಧಾನಸಭಾ ಚುನಾವಣಾ ಫಲಿತಾಂಶಗಳ ಪರಾಮರ್ಶೆಗೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಸೇರಲಿದೆ‘ ಎಂದು ಅವರು ತಿಳಿಸಿದರು.</p>.<p>ಇದೇ ವೇಳೆ ಸಭೆಯಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣೆಯಲ್ಲಿ ಜಯಗಳಿಸಿದ ಮಮತಾ ಬ್ಯಾನರ್ಜಿ, ಎಂ. ಕೆ.ಸ್ಟಾಲಿನ್ ಮತ್ತು ಎಡಪಕ್ಷಗಳನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/oxygen-crisix-supreme-court-refuses-to-stay-karnataka-hc-order-on-more-oxygen-to-state-828651.html" target="_blank"> ರಾಜ್ಯಕ್ಕೆ 1,200 ಟನ್ ಆಮ್ಲಜನಕ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>