ಈ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸುರ್ಜೇವಾಲ ಅವರು, ‘ಕೇಂದ್ರ ಸರ್ಕಾರ ಕೆಲಸಕ್ಕೆ ಬಾರದ ವಿಚಾರಗಳ ಬಗ್ಗೆ ಗಮನ ಹರಿಸುವ ಬದಲು, ಈಗಾಗಲೇ ತಾನೇ ನಿಗದಿಪಡಿಸಿರುವ ಗುರಿಯಂತೆ, ಡಿ.31ರೊಳಗೆ 100 ಕೋಟಿ ಭಾರತೀಯರಿಗೆ ಲಸಿಕೆ ನೀಡುವ ಗುರಿಯನ್ನು ತಲುಪಲು, ಪ್ರತಿ ದಿನ 80 ಲಕ್ಷದಿಂದ 1 ಕೋಟಿ ಜನರಿಗೆ ಲಸಿಕೆ ನೀಡುವತ್ತ ಗಮನ ಹರಿಸುವ ಮೂಲಕ ರಾಜಧರ್ಮವನ್ನು ಪಾಲಿಸಬೇಕು' ಎಂದು ಹೇಳಿದ್ದಾರೆ.