<p><strong>ನವದೆಹಲಿ:</strong> ದೇಶದಲ್ಲಿ ಸರ್ವಾಧಿಕಾರ ಧೋರಣೆಯ ವಿರುದ್ಧ ಹೋರಾಡಲು ಮತ್ತು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಜನರ ರಕ್ಷಣೆಗಾಗಿ ಎಲ್ಲರೂ ಒಗ್ಗೂಡಬೇಕು ಎಂದು ಕಾಂಗ್ರೆಸ್ ಸ್ಥಾಪನೆಯ ದಿನದಂದು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಕರೆ ನೀಡಿದರು.</p>.<p>ಕಾಂಗ್ರೆಸ್ 136ನೇ ಸಂಸ್ಥಾಪನಾ ದಿನಾಚರಣೆಯಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಸ್ವಾತಂತ್ರ್ಯ ಪೂರ್ವದಂತೆ ದೇಶವು ಕಷ್ಟದ ಸಮಯದಲ್ಲಿ ನಡೆಯುತ್ತಿದೆ ಎಂದು ಹೇಳಿದರು.</p>.<p>ಸ್ವಾತಂತ್ರ್ಯ ಹೋರಾಟ ಸಂಗ್ರಾಮದಲ್ಲಿ ಜನಾಂದೋಲನದ ಭಾಗವಾಗಿ ಪಕ್ಷವನ್ನು ಕಟ್ಟಲಾಯಿತು. ನಾಯಕರು ಹಾಗೂ ಕಾರ್ಯಕರ್ತರ ದೌರ್ಜನ್ಯದ ಕಠಿಣ ಸಮಯದಲ್ಲೂ ಪಕ್ಷ ಹಾದು ಹೋಗಿದೆ ಎಂದು ಹೇಳಿದರು.</p>.<p>ದೇಶವು ಸ್ವಾತಂತ್ರ್ಯ ಪಡೆಯುವಲ್ಲಿ ಮತ್ತು ದೇಶ ಸೇವೆಯಲ್ಲಿ ತಮ್ಮ ಗುರಿ ಸಾಧಿಸುವಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಹಿಂದೆ ಬಿದ್ದಿಲ್ಲ. ಲಾಠಿ ಪ್ರಹಾರವಾದಾಗಲೂ, ಜೈಲಿಗೆ ಸೇರಿದಾಗಲೂ ತ್ಯಾಗಗಳನ್ನು ಮಾಡಿ ದೇಶದ ಹಳೆಯ ಪಕ್ಷವು ರಾಷ್ಟ್ರಕ್ಕೆ ಬಲವಾದ ಅಡಿಪಾಯ ಹಾಕಿಕೊಟ್ಟಿದೆ ಎಂದರು.</p>.<p>ಇದನ್ನೂ ಓದಿ:<a href="https://www.prajavani.net/india-news/cong-seeks-smriti-irani-resignation-over-charges-levelled-by-shooter-791537.html" itemprop="url">ಭ್ರಷ್ಟಾಚಾರ ಆರೋಪ: ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ </a></p>.<p>ಇಂದು ಮತ್ತೊಮ್ಮೆ ಸ್ವಾತಂತ್ರ್ಯ ಪೂರ್ವದ ಸನ್ನಿವೇಶವೇ ಸೃಷ್ಟಿಯಾಗಿದೆ. ಜನರ ಹಕ್ಕುಗಳನ್ನು ಹತ್ತಿಕ್ಕಲಾಗಿದೆ. ಎಲ್ಲೆಡೆ ಸರ್ವಾಧಿಕಾರವಿದೆ. ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಕಿತ್ತೊಗೆಯಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು.</p>.<p>ನಿರುದ್ಯೋಗ ಉತ್ತುಂಗದಲ್ಲಿದ್ದು, ರೈತರ ಮೇಲೆ ದಾಳಿ ನಡೆಯುತ್ತಿದೆ. ಅನ್ನದಾತರ ಮೇಲೆ ಕಪ್ಪು ಕಾನೂನುಗಳನ್ನು ವಿಧಿಸಲಾಗಿದೆ. ಅಂತಹ ಸಂದರ್ಭದಲ್ಲಿ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸುವುದು ಮತ್ತು ಅದರ ವಿರುದ್ಧ ಹೋರಾಡುವುದು ನಮ್ಮ ಜವಾಬ್ದಾರಿಯಾಗಿದೆ. ಇದುವೇ ನಿಜವಾದ ದೇಶಭಕ್ತಿ ಎಂದರು.</p>.<p>ತ್ರಿವರ್ಣ ಧ್ವಜದ ಹೆಮ್ಮೆ ಹಾಗೂ ಗೌರವ ಉಳಿಸಿಕೊಳ್ಳಲು ನಾವೆಲ್ಲರೂ ಒಂದಾಗಬೇಕು. ಅದರಿಂದಾಗಿಯೇ ನಾವು ಸ್ವಾತಂತ್ರ್ಯವನ್ನು ಸಾಧಿಸಿದ್ದೇವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಸರ್ವಾಧಿಕಾರ ಧೋರಣೆಯ ವಿರುದ್ಧ ಹೋರಾಡಲು ಮತ್ತು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಜನರ ರಕ್ಷಣೆಗಾಗಿ ಎಲ್ಲರೂ ಒಗ್ಗೂಡಬೇಕು ಎಂದು ಕಾಂಗ್ರೆಸ್ ಸ್ಥಾಪನೆಯ ದಿನದಂದು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಕರೆ ನೀಡಿದರು.</p>.<p>ಕಾಂಗ್ರೆಸ್ 136ನೇ ಸಂಸ್ಥಾಪನಾ ದಿನಾಚರಣೆಯಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಸ್ವಾತಂತ್ರ್ಯ ಪೂರ್ವದಂತೆ ದೇಶವು ಕಷ್ಟದ ಸಮಯದಲ್ಲಿ ನಡೆಯುತ್ತಿದೆ ಎಂದು ಹೇಳಿದರು.</p>.<p>ಸ್ವಾತಂತ್ರ್ಯ ಹೋರಾಟ ಸಂಗ್ರಾಮದಲ್ಲಿ ಜನಾಂದೋಲನದ ಭಾಗವಾಗಿ ಪಕ್ಷವನ್ನು ಕಟ್ಟಲಾಯಿತು. ನಾಯಕರು ಹಾಗೂ ಕಾರ್ಯಕರ್ತರ ದೌರ್ಜನ್ಯದ ಕಠಿಣ ಸಮಯದಲ್ಲೂ ಪಕ್ಷ ಹಾದು ಹೋಗಿದೆ ಎಂದು ಹೇಳಿದರು.</p>.<p>ದೇಶವು ಸ್ವಾತಂತ್ರ್ಯ ಪಡೆಯುವಲ್ಲಿ ಮತ್ತು ದೇಶ ಸೇವೆಯಲ್ಲಿ ತಮ್ಮ ಗುರಿ ಸಾಧಿಸುವಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಹಿಂದೆ ಬಿದ್ದಿಲ್ಲ. ಲಾಠಿ ಪ್ರಹಾರವಾದಾಗಲೂ, ಜೈಲಿಗೆ ಸೇರಿದಾಗಲೂ ತ್ಯಾಗಗಳನ್ನು ಮಾಡಿ ದೇಶದ ಹಳೆಯ ಪಕ್ಷವು ರಾಷ್ಟ್ರಕ್ಕೆ ಬಲವಾದ ಅಡಿಪಾಯ ಹಾಕಿಕೊಟ್ಟಿದೆ ಎಂದರು.</p>.<p>ಇದನ್ನೂ ಓದಿ:<a href="https://www.prajavani.net/india-news/cong-seeks-smriti-irani-resignation-over-charges-levelled-by-shooter-791537.html" itemprop="url">ಭ್ರಷ್ಟಾಚಾರ ಆರೋಪ: ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ </a></p>.<p>ಇಂದು ಮತ್ತೊಮ್ಮೆ ಸ್ವಾತಂತ್ರ್ಯ ಪೂರ್ವದ ಸನ್ನಿವೇಶವೇ ಸೃಷ್ಟಿಯಾಗಿದೆ. ಜನರ ಹಕ್ಕುಗಳನ್ನು ಹತ್ತಿಕ್ಕಲಾಗಿದೆ. ಎಲ್ಲೆಡೆ ಸರ್ವಾಧಿಕಾರವಿದೆ. ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಕಿತ್ತೊಗೆಯಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು.</p>.<p>ನಿರುದ್ಯೋಗ ಉತ್ತುಂಗದಲ್ಲಿದ್ದು, ರೈತರ ಮೇಲೆ ದಾಳಿ ನಡೆಯುತ್ತಿದೆ. ಅನ್ನದಾತರ ಮೇಲೆ ಕಪ್ಪು ಕಾನೂನುಗಳನ್ನು ವಿಧಿಸಲಾಗಿದೆ. ಅಂತಹ ಸಂದರ್ಭದಲ್ಲಿ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸುವುದು ಮತ್ತು ಅದರ ವಿರುದ್ಧ ಹೋರಾಡುವುದು ನಮ್ಮ ಜವಾಬ್ದಾರಿಯಾಗಿದೆ. ಇದುವೇ ನಿಜವಾದ ದೇಶಭಕ್ತಿ ಎಂದರು.</p>.<p>ತ್ರಿವರ್ಣ ಧ್ವಜದ ಹೆಮ್ಮೆ ಹಾಗೂ ಗೌರವ ಉಳಿಸಿಕೊಳ್ಳಲು ನಾವೆಲ್ಲರೂ ಒಂದಾಗಬೇಕು. ಅದರಿಂದಾಗಿಯೇ ನಾವು ಸ್ವಾತಂತ್ರ್ಯವನ್ನು ಸಾಧಿಸಿದ್ದೇವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>