ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ಣ ಗುಣಮುಖವಾಗುವವರೆಗೆ ವಿಚಾರಣೆ ಮುಂದೂಡಿ: ಸೋನಿಯಾ ಮನವಿ

ಜಾರಿ ನಿರ್ದೇಶನಾಲಯಕ್ಕೆ ಸೋನಿಯಾ ಗಾಂಧಿ ಪತ್ರ
Last Updated 22 ಜೂನ್ 2022, 15:37 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಮತ್ತಷ್ಟು ಕಾಲಾವಕಾಶ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯ(ಇ.ಡಿ)ಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಇ.ಡಿ ಅಧಿಕಾರಿಗಳಿಗೆ ಪತ್ರ ಬರೆದಿರುವ ಸೋನಿಯಾ, ಕೋವಿಡ್ ಮತ್ತು ಶ್ವಾಸಕೋಶ ಸೋಂಕಿಗೆ ತುತ್ತಾಗಿರುವ ತಮಗೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ಣ ಗುಣಮುಖವಾಗುವವರೆಗೆ ವಿಚಾರಣೆಯನ್ನು ಮುಂದೂಡುವಂತೆ ಇ.ಡಿ ಅಧಿಕಾರಿಗಳಿಗೆ ಕೋರಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು ಟ್ವಿಟರ್ ಮೂಲಕ ಬುಧವಾರ ಮಾಹಿತಿ ನೀಡಿದ್ದಾರೆ.

ಸರ್ ಗಂಗಾರಾಮ್ ಆಸ್ಪತ್ರೆಯಿಂದ ಸೋಮವಾರ ಡಿಸ್ಚಾರ್ಜ್ ಆಗಿದ್ದ ಸೋನಿಯಾ ಅವರಿಗೆ, ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಪಕ್ಷ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT