<p class="title"><strong>ನವದೆಹಲಿ: </strong>ಸಮಾನ ಮನಸ್ಕ ಪಕ್ಷಗಳನ್ನು ಒಂದುಗೂಡಿಸುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಯತ್ನವನ್ನು ಸ್ವಾಗತಿಸಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಕಪಿಲ್ ಸಿಬಲ್, ‘ಇದೇ ವೇಳೆ ಪಕ್ಷವನ್ನೂ ಬಲಪಡಿಸಬೇಕು. ಇದು ಸಾಧ್ಯವಾಗದೇ ಯಾವುದೇ ವಿರೋಧಪಕ್ಷಗಳ ಒಗ್ಗೂಡುವಿಕೆ ಅಸಾಧ್ಯ’ ಎಂದು ಪ್ರತಿಪಾದಿಸಿದ್ದಾರೆ.</p>.<p class="title">ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕವಾಗಿ ಆಮೂಲಾಗ್ರ ಬದಲಾವಣೆಗೆ ಆಗ್ರಹಿಸಿ ಪತ್ರಬರೆದಿದ್ದ ತಾವು ಸೇರಿ ಪಕ್ಷದ 23 ನಾಯಕರು, ಪಕ್ಷಕ್ಕೆ ಪುನಃಶ್ಚೇತನ ನೀಡಬೇಕು ಮತ್ತು ಬಲಪಡಿಸಬೇಕು ಎಂಬ ಹಕ್ಕೊತ್ತಾಯವನ್ನು ಮಂಡಿಸುತ್ತಲೇ ಇರುತ್ತೇವೆ ಎಂದಿದ್ದಾರೆ.</p>.<p>ಕಾಂಗ್ರೆಸ್ ಪಕ್ಷವನ್ನು ಪುನಃಶ್ಚೇತನಗೊಳಿಸುವ ಯಾವುದೇ ಯತ್ನಗಳಿಗೆ ನಾನು ಮತ್ತು ಪಕ್ಷದ ನನ್ನ ಸಹೋದ್ಯೋಗಿಗಳು ಪೂರ್ಣ ಬೆಂಬಲ ನೀಡಲಿದ್ದೇವೆ. ಇದು ನನ್ನ ಪ್ರಶ್ನೆಯಲ್ಲ. ಕಾಂಗ್ರೆಸ್ ಪಕ್ಷವನ್ನು ಪುನಃಶ್ಚೇತನಗೊಳಿಸಿ, ವಿರೋಧಪಕ್ಷಗಳ ಒಕ್ಕೂಟದ ಮುಂಚೂಣಿಗೆ ಬರುವಂತೆ ಬಲಪಡಿಸುವುದು ಈಗಿನ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>ಪಕ್ಷವನ್ನು ಬಲಪಡಿಸದೇ ವಿರೋಧಪಕ್ಷಗಳ ಒಗ್ಗೂಡುವಿಕೆಯ ಯತ್ನ ಕೈಗೂಡುವುದಿಲ್ಲ. ಪಕ್ಷವು ಹೊಂದಿದ್ದ ನಾಯಕತ್ವ, ಉನ್ನತಿಯನ್ನು ಮುಖಂಡರು ಅರ್ಥೈಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ.</p>.<p>ದೇಶದಲ್ಲಿ ವಿರೋಧಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಗಾಂಧಿ ಅವರು ಆಗಸ್ಟ್ 20ರಂದು ವರ್ಚುವಲ್ ಸ್ವರೂಪದಲ್ಲಿ ಸಭೆ ನಡೆಸಲು ಸಿದ್ಧತೆ ನಡೆಸಿರುವ ಹೊತ್ತಿನಲ್ಲಿಯೇ ಸಿಬಲ್ ಈ ಹೇಳಿಕೆ ನೀಡಿದ್ದಾರೆ.</p>.<p><a href="https://www.prajavani.net/district/chitradurga/b-sriramulu-urges-to-stop-disrespecting-jawaharlal-nehru-and-atal-bihari-vajpayee-858027.html" itemprop="url">ನೆಹರೂ, ವಾಜಪೇಯಿ ಅವಹೇಳನ ನಿಲ್ಲಿಸಿ: ಬಿ.ಶ್ರೀರಾಮುಲು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಸಮಾನ ಮನಸ್ಕ ಪಕ್ಷಗಳನ್ನು ಒಂದುಗೂಡಿಸುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಯತ್ನವನ್ನು ಸ್ವಾಗತಿಸಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಕಪಿಲ್ ಸಿಬಲ್, ‘ಇದೇ ವೇಳೆ ಪಕ್ಷವನ್ನೂ ಬಲಪಡಿಸಬೇಕು. ಇದು ಸಾಧ್ಯವಾಗದೇ ಯಾವುದೇ ವಿರೋಧಪಕ್ಷಗಳ ಒಗ್ಗೂಡುವಿಕೆ ಅಸಾಧ್ಯ’ ಎಂದು ಪ್ರತಿಪಾದಿಸಿದ್ದಾರೆ.</p>.<p class="title">ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕವಾಗಿ ಆಮೂಲಾಗ್ರ ಬದಲಾವಣೆಗೆ ಆಗ್ರಹಿಸಿ ಪತ್ರಬರೆದಿದ್ದ ತಾವು ಸೇರಿ ಪಕ್ಷದ 23 ನಾಯಕರು, ಪಕ್ಷಕ್ಕೆ ಪುನಃಶ್ಚೇತನ ನೀಡಬೇಕು ಮತ್ತು ಬಲಪಡಿಸಬೇಕು ಎಂಬ ಹಕ್ಕೊತ್ತಾಯವನ್ನು ಮಂಡಿಸುತ್ತಲೇ ಇರುತ್ತೇವೆ ಎಂದಿದ್ದಾರೆ.</p>.<p>ಕಾಂಗ್ರೆಸ್ ಪಕ್ಷವನ್ನು ಪುನಃಶ್ಚೇತನಗೊಳಿಸುವ ಯಾವುದೇ ಯತ್ನಗಳಿಗೆ ನಾನು ಮತ್ತು ಪಕ್ಷದ ನನ್ನ ಸಹೋದ್ಯೋಗಿಗಳು ಪೂರ್ಣ ಬೆಂಬಲ ನೀಡಲಿದ್ದೇವೆ. ಇದು ನನ್ನ ಪ್ರಶ್ನೆಯಲ್ಲ. ಕಾಂಗ್ರೆಸ್ ಪಕ್ಷವನ್ನು ಪುನಃಶ್ಚೇತನಗೊಳಿಸಿ, ವಿರೋಧಪಕ್ಷಗಳ ಒಕ್ಕೂಟದ ಮುಂಚೂಣಿಗೆ ಬರುವಂತೆ ಬಲಪಡಿಸುವುದು ಈಗಿನ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>ಪಕ್ಷವನ್ನು ಬಲಪಡಿಸದೇ ವಿರೋಧಪಕ್ಷಗಳ ಒಗ್ಗೂಡುವಿಕೆಯ ಯತ್ನ ಕೈಗೂಡುವುದಿಲ್ಲ. ಪಕ್ಷವು ಹೊಂದಿದ್ದ ನಾಯಕತ್ವ, ಉನ್ನತಿಯನ್ನು ಮುಖಂಡರು ಅರ್ಥೈಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ.</p>.<p>ದೇಶದಲ್ಲಿ ವಿರೋಧಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಗಾಂಧಿ ಅವರು ಆಗಸ್ಟ್ 20ರಂದು ವರ್ಚುವಲ್ ಸ್ವರೂಪದಲ್ಲಿ ಸಭೆ ನಡೆಸಲು ಸಿದ್ಧತೆ ನಡೆಸಿರುವ ಹೊತ್ತಿನಲ್ಲಿಯೇ ಸಿಬಲ್ ಈ ಹೇಳಿಕೆ ನೀಡಿದ್ದಾರೆ.</p>.<p><a href="https://www.prajavani.net/district/chitradurga/b-sriramulu-urges-to-stop-disrespecting-jawaharlal-nehru-and-atal-bihari-vajpayee-858027.html" itemprop="url">ನೆಹರೂ, ವಾಜಪೇಯಿ ಅವಹೇಳನ ನಿಲ್ಲಿಸಿ: ಬಿ.ಶ್ರೀರಾಮುಲು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>