ಪತ್ರ ಬರೆದವರ ಪೈಕಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮೇಲ್ಮನೆಯಲ್ಲಿ ಪಕ್ಷದ ಉಪನಾಯಕ ಆನಂದ್ ಶರ್ಮಾ, ಮಾಜಿ ಮುಖ್ಯಮಂತ್ರಿಗಳಾದ ಭೂಪಿಂದರ್ ಸಿಂಗ್ ಹೂಡಾ, ಪೃಥ್ವಿರಾಜ್ ಚವಾಣ್ ಮತ್ತು ಸಂಸದರಾದ ಮನೀಶ್ ತಿವಾರಿ , ವಿವೇಕ್ ತಂಖಾ ಮತ್ತು ಶಶಿ ತರೂರ್ ಸಭೆಗೆ ಹಾಜರಾಗಿದ್ದರು. ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ನಾಥ್ ಮತ್ತು ಪಕ್ಷದ ಹಿರಿಯ ನಾಯಕ ಪಿ. ಚಿದಂಬರಂ ಅವರೂ ಪಾಲ್ಗೊಂಡಿದ್ದರು.