ಪರಿಸರದ ಮೇಲಿನ ಪರಿಣಾಮಗಳ ವಿಶ್ಲೇಷಣಾ ಅಧಿಸೂಚನೆ 2020 ಕುರಿತು ಪ್ರಕಟಣೆಯಾಗಿರುವ ಲೇಖನವೊಂದರಲ್ಲಿ ಸೋನಿಯಾ ಗಾಂಧಿ ಅವರು, ‘ಸರ್ಕಾರದ ಈ ಅಧಿಸೂಚನೆ ಕುರಿತು ಸಾರ್ವಜನಿಕರಿಂದ ಆಕ್ಷೇಪಗಳು ವ್ಯಕ್ತವಾಗಿವೆ. ಇದರಲ್ಲಿರುವ ಅಂಶಗಳು ಭಾರತದ ಪರಿಸರ ನಿಯಮಗಳಿಗೆ ವಿರುದ್ಧವಾಗಿವೆ. ಮೊದಲು ಸರ್ಕಾರ ಈ ಕರಡು ಅಧಿಸೂಚನೆಯನ್ನು ಹಿಂಪಡೆಯಬೇಕು. ನಂತರ, ಸಾರ್ವಜನಿಕ ಸಮಾಲೋಚನೆ ಮೂಲಕ ಈ ಅಧಿಸೂಚನೆಯನ್ನು ರಾಷ್ಟ್ರೀಯ ಕಾರ್ಯಸೂಚಿಯನ್ನಾಗಿಸಬೇಕು. ಈ ಮೂಲಕ ಭಾರತ, ಜಾಗತಿಕ ತಾಪಮಾನ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.