ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ ವ್ಯಾಪಿಸಿದ ನೈರುತ್ಯ ಮುಂಗಾರು ಮಾರುತಗಳು: ಹವಾಮಾನ ಇಲಾಖೆ

ಐದು ದಿನ ವಿಳಂಬ, ದೇಶದ ವಿವಿಧ ರಾಜ್ಯಗಳಲ್ಲಿ ಬಿರುಸಿನ ಮಳೆ
Last Updated 13 ಜುಲೈ 2021, 8:16 IST
ಅಕ್ಷರ ಗಾತ್ರ

ನವದೆಹಲಿ: ನಿಗದಿತ ದಿನಕ್ಕಿಂತ ಐದು ದಿನಗಳು ವಿಳಂಬವಾಗಿ ದೇಶವನ್ನು ಪ್ರವೇಶಿಸಿರುವ ನೈರುತ್ಯ ಮುಂಗಾರು ಮಾರುತಗಳು ಮಂಗಳವಾರದ ವೇಳಗೆ ಇಡೀ ದೇಶವನ್ನೇ ವ್ಯಾಪಿಸಿದ್ದು, ಉತ್ತರ ಭಾರತ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಿರುಸಿನ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಸಾಮಾನ್ಯವಾಗಿ ಜುಲೈ 8ರ ವೇಳೆಗೆ ದೇಶದಾದ್ಯಂತ ನೈರುತ್ಯ ಮುಂಗಾರು ಮಾರುತಗಳ ವ್ಯಾಪಿಸುತ್ತದೆ. ಆದರೆ, ಈ ವರ್ಷದ ಐದು ದಿನ ವಿಳಂಬವಾಗಿದೆ. ಸೋಮವಾರ ರಾಜಸ್ಥಾನದ ಜೈಸಲ್ಮೇರ್‌ ಮತ್ತು ಗಂಗಾನಗರ ವ್ಯಾಪ್ತಿಯಲ್ಲಿ ಮಳೆ ಆರಂಭವಾಗಿದೆ.

ಮಂಗಳವಾರ ಎನ್‌ಸಿಆರ್‌ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಮಾರುತಗಳು ದೆಹಲಿಯನ್ನೂ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

’ನಾಲ್ಕು ದಿನಗಳಿಂದ ಬಂಗಾಳ ಕೊಲ್ಲಿಯಲ್ಲಿ ನಿರಂತರವಾಗಿ ತೇವಾಂಶವುಳ್ಳ ಗಾಳಿ ಬೀಸುತ್ತಿರುವುರಿಂದ, ದೆಹಲಿ, ಉತ್ತರ ಪ್ರದೇಶ, ಪಂಜಾಬ್‌, ಹರಿಯಾಣ, ರಾಜಸ್ಥಾನ ಸೇರಿದಂತೆ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳೆಯಾಗುತ್ತಿದೆ’ ಎಂದು ಐಎಂಡಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT