ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನದ ನಂತರ ಆಸ್ಪತ್ರೆಯ ವೆಚ್ಚದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳ ಕುರಿತು ಚರಣ್ ಭಾವನಾತ್ಮಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಹಾಗೂ ಕುಟುಂಬದ ನಡುವಿನ ಹಣಕಾಸು ವ್ಯವಹಾರ ವೈಯಕ್ತಿಕವಾಗಿದ್ದು, ಹಣ ನೀಡದೇ ಮೃತದೇಹವನ್ನು ನೀಡಲು ಆಸ್ಪತ್ರೆ ನಿರಾಕರಿಸಿತ್ತು ಎನ್ನುವ ವರದಿಯನ್ನು ಚರಣ್ ನಿರಾಕರಿಸಿದ್ದಾರೆ.