ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ಚಿತ್ರವೊಂದನ್ನು ಪ್ರದರ್ಶಿಸಿದ್ದು, ಸ್ಫೋಟ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಯ ತಂದೆ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಜೊತೆಗೆ ನಿಂತಿರುವುದು ಕಂಡು ಬಂದಿದೆ. ಈ ಚಿತ್ರವನ್ನು ಉಲ್ಲೇಖಿಸಿದ ಅನುರಾಗ್ ಠಾಕೂರ್ ಅವರು, ಎಸ್ಪಿಗೆ ಅಹಮದಾಬಾದ್ ಸ್ಫೋಟದ ಉಗ್ರರ ಜೊತೆ ನಂಟಿದೆ ಎಂದು ದೂರಿದ್ದಾರೆ.