ನವದೆಹಲಿ: ಸಮಾಜವಾದಿ ಪಕ್ಷದ ಶಾಸಕ ಸುಭಾಷ್ ರಾಯ್ ಸೋಮವಾರ ಬಿಜೆಪಿ ಸೇರಿದರು.
ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ದಿನೇಶ್ ಶರ್ಮಾಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರು ರಾಯ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಜಲಾಲ್ಪುರ ಕ್ಷೇತ್ರದ ಶಾಸಕರಾದ ರಾಯ್ ಈ ಮೊದಲು ಬಿಜೆಪಿ ಸದಸ್ಯರಾಗಿದ್ದರು. ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಸ್ವತಂತ್ರ ದೇವ್ ಸಿಂಗ್, ರಾಯ್ಗೆ ಇದು ‘ಘರ್ ವಾಪಸಿ’ ಎಂದು ಹೇಳಿದರು.
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆ. ಶಾಂತಿ ಮತ್ತು ರಾಷ್ಟ್ರೀಯತೆಯ ಸ್ಫೂರ್ತಿ ಇದೆ. ಈ ಎಲ್ಲಾ ಕಾರಣಕ್ಕೆ ರಾಯ್ ಬಿಜೆಪಿ ಸೇರಿದ್ದಾರೆ’ ಎಂದು ಅವರು ಹೇಳಿದರು.