ಸರ್ಕಾರದ ವಿರುದ್ಧ ಭಾನುವಾರವೂ ಗುಡುಗಿದ್ದ ಫಡಣವೀಸ್, ‘ಮಹಾರಾಷ್ಟ್ರದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ’ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಠಾಕ್ರೆ, ‘ಮಹಾರಾಷ್ಟ್ರದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ ಎಂದಾದರೆ, ದೆಹಲಿ ಹೊರವಲಯದಲ್ಲಿ ಪ್ರತಿಭಟನಾನಿರತ ರೈತರನ್ನು ಗುರಿಯಾಗಿಸಿರುವ ರೀತಿಯನ್ನು ಗಮನಿಸಿದರೆ ದೇಶದ ಉಳಿದ ಭಾಗಗಳಲ್ಲಿ ಘೋಷಿತ ತುರ್ತುಪರಿಸ್ಥಿತಿ ಇದೆ’ ಎಂದಿದ್ದರು.