ಇಲ್ಲಿನ ಕೊಲತೂರ್ ವಿಧಾನಸಭಾ ಕ್ಷೇತ್ರದ ಆರುಮಿಗು ಕಪಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮಾತನಾಡಿದ ಅವರು,ಉಚಿತ ಕೊಡುಗೆ ಬೇರೆ, ಕಲ್ಯಾಣ ಕಾರ್ಯಕ್ರಮಗಳು ಬೇರೆ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಶಿಕ್ಷಣ ಮತ್ತು ಆರೋಗ್ಯದ ಮೇಲಿನ ವೆಚ್ಚ ಉಚಿತ ಅಲ್ಲ. ಕಾರಣ ಶಿಕ್ಷಣ ಎಂದರೆ ಜ್ಞಾನ, ವೈದ್ಯಕೀಯ ಕ್ಷೇತ್ರ ಆರೋಗ್ಯಕ್ಕೆ ಸಂಬಂಧಿಸಿದ್ದು. ಈ ಎರಡೂ ಕ್ಷೇತ್ರಗಳಲ್ಲಿ ಸಾಕಷ್ಟು ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬಯಸುತ್ತದೆ ಎಂದು ಹೇಳಿದರು.