ಬುಧವಾರ ಸದನದಲ್ಲಿ ಮಾತನಾಡಿದ ವೆಂಕಯ್ಯನಾಯ್ಡು, ‘ಪ್ರಜಾಭುತ್ವದ ದೇಗುಲದಲ್ಲಿ(ಸಂಸತ್ತು) ನಡೆದ ಈ ಗದ್ದಲದಿಂದಾಗಿ ನಾನು ನಿದ್ದೆಯಿಲ್ಲದ ರಾತ್ರಿ ಕಳೆದೆ. ರಾಜ್ಯಸಭೆಯಲ್ಲಿ ಅಧಿಕಾರಿಗಳು, ವರದಿಗಾರರು, ಪ್ರಧಾನ ಕಾರ್ಯದರ್ಶಿಗಳು ಕುಳಿತುಕೊಳ್ಳುವ ಮೇಜಿನ ಜಾಗವನ್ನು ದೇಗುಲದ ಗರ್ಭಗುಡಿ ಎಂದು ಪರಿಗಣಿಸಲಾಗುತ್ತದೆ’ ಎಂದು ಅವರು ಭಾವುಕರಾದರು.