<p><strong>ನವದೆಹಲಿ</strong>: ಕೆಲವು ವಿರೋಧ ಪಕ್ಷದ ಸಂಸದರು ಸಭಾಪತಿ ಪೀಠದ ಮುಂಭಾಗದಲ್ಲಿರುವ ಮೇಜಿಗೆ ಹತ್ತಿ, ಗದ್ದಲ ಸೃಷ್ಟಿಸಿದ ಬಗ್ಗೆ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯನಾಯ್ಡು ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯಸಭೆಯಲ್ಲಿ ಮಂಗಳವಾರ ನೂತನ ಕೃಷಿ ಕಾಯ್ದೆ ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ಕೆಲ ಸದಸ್ಯರು ತೀವ್ರ ಗದ್ದಲ ಮಾಡಿ ಸಭಾಪತಿ ಪೀಠದ ಮುಂಭಾಗದಲ್ಲಿರುವ ಮೇಜಿಗೆ ಹತ್ತಿ ಕಪ್ಪು ಬಟ್ಟೆ ಪ್ರದರ್ಶಿಸಿದ್ದರು. ಅಲ್ಲದೆ ದಾಖಲೆಗಳನ್ನು ಎಸೆದಿದ್ದರು.</p>.<p>ಬುಧವಾರ ಸದನದಲ್ಲಿ ಮಾತನಾಡಿದ ವೆಂಕಯ್ಯನಾಯ್ಡು, ‘ಪ್ರಜಾಭುತ್ವದ ದೇಗುಲದಲ್ಲಿ(ಸಂಸತ್ತು) ನಡೆದ ಈ ಗದ್ದಲದಿಂದಾಗಿ ನಾನು ನಿದ್ದೆಯಿಲ್ಲದ ರಾತ್ರಿ ಕಳೆದೆ. ರಾಜ್ಯಸಭೆಯಲ್ಲಿ ಅಧಿಕಾರಿಗಳು, ವರದಿಗಾರರು, ಪ್ರಧಾನ ಕಾರ್ಯದರ್ಶಿಗಳು ಕುಳಿತುಕೊಳ್ಳುವ ಮೇಜಿನ ಜಾಗವನ್ನು ದೇಗುಲದ ಗರ್ಭಗುಡಿ ಎಂದು ಪರಿಗಣಿಸಲಾಗುತ್ತದೆ’ ಎಂದು ಅವರು ಭಾವುಕರಾದರು.</p>.<p>‘ಈ ಘಟನೆಯಿಂದ ನನಗೆ ಬಹಳ ಬೇಸರವಾಗಿದೆ. ದೇವಸ್ಥಾನದಲ್ಲಿ ಗರ್ಭಗುಡಿ ತನಕ ಮಾತ್ರ ಭಕ್ತರು ಪ್ರವೇಶಿಸಬಹುದು. ಅದರಂತೆ ಸದನಕ್ಕೂ ಒಂದು ಪಾವಿತ್ರ್ಯತೆ ಇದೆ. ಈ ಗದ್ದಲದಿಂದ ಸದನದ ಪಾವಿತ್ರ್ಯತೆ ನಾಶವಾಗಿದೆ’ ಎಂದು ಅವರು ಹೇಳಿದರು.</p>.<p>‘ಮಂಗಳವಾರ ಸದನದಲ್ಲಿ ಚರ್ಚೆಗಾಗಿ ಪಟ್ಟಿ ಮಾಡಲಾದ ವಿಷಯಗಳು ಈ ರೀತಿಯ ಗದ್ದಲ ಸೃಷ್ಟಿಯಾಗಲು ಸಾಧ್ಯವಿಲ್ಲ ಎಂದು ನಾನು ಭಾವಿಸಿದ್ದೆ. ಈ ಪಟ್ಟಿಯಲ್ಲಿ ನೂತನ ಕೃಷಿ ಕಾಯ್ದೆಯೂ ಇತ್ತು. ಈ ವಿಷಯವಾಗಿ ಚರ್ಚಿಸಲು ಬಹುತೇಕ ನಾಯಕ ಕಾಯುತ್ತಿದ್ದರು. ಆದರೂ ಯಾಕೆ ಗದ್ದಲ ಸೃಷ್ಟಿಯಾಯಿತು ಎಂಬುದು ನನಗೆ ತಿಳಿಯುತ್ತಿಲ್ಲ’ ಎಂದರು.</p>.<p>‘ ರೈತರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಸುವರ್ಣ ಅವಕಾಶ ಇತ್ತು. ಬಹುಶಃ ಸದನ ಕಾರ್ಯನಿರ್ವಹಿಸದಂತೆ ತಡೆಯುವುದೇ ಗದ್ದಲದ ಹಿಂದಿನ ಉದ್ದೇಶವಾಗಿರಬೇಕು’ ಎಂದು ಅವರು ಹೇಳಿದರು.</p>.<p>‘ಒಬ್ಬ ಸಭಾಪತಿಯಾಗಿ ಪ್ರಜಾಪ್ರಭುತ್ವದ ದೇಗುಲದಲ್ಲಿ ನಡೆದ ಈ ರೀತಿಯ ಘಟನೆಗಳ ಪರಿಣಾಮ ಏನಿರಬಹುದೆಂದು ಊಹಿಸಲು ನನಗೆ ಭಯವಾಗುತ್ತಿದೆ’ ಎಂದೂ ಅವರು ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೆಲವು ವಿರೋಧ ಪಕ್ಷದ ಸಂಸದರು ಸಭಾಪತಿ ಪೀಠದ ಮುಂಭಾಗದಲ್ಲಿರುವ ಮೇಜಿಗೆ ಹತ್ತಿ, ಗದ್ದಲ ಸೃಷ್ಟಿಸಿದ ಬಗ್ಗೆ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯನಾಯ್ಡು ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯಸಭೆಯಲ್ಲಿ ಮಂಗಳವಾರ ನೂತನ ಕೃಷಿ ಕಾಯ್ದೆ ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ಕೆಲ ಸದಸ್ಯರು ತೀವ್ರ ಗದ್ದಲ ಮಾಡಿ ಸಭಾಪತಿ ಪೀಠದ ಮುಂಭಾಗದಲ್ಲಿರುವ ಮೇಜಿಗೆ ಹತ್ತಿ ಕಪ್ಪು ಬಟ್ಟೆ ಪ್ರದರ್ಶಿಸಿದ್ದರು. ಅಲ್ಲದೆ ದಾಖಲೆಗಳನ್ನು ಎಸೆದಿದ್ದರು.</p>.<p>ಬುಧವಾರ ಸದನದಲ್ಲಿ ಮಾತನಾಡಿದ ವೆಂಕಯ್ಯನಾಯ್ಡು, ‘ಪ್ರಜಾಭುತ್ವದ ದೇಗುಲದಲ್ಲಿ(ಸಂಸತ್ತು) ನಡೆದ ಈ ಗದ್ದಲದಿಂದಾಗಿ ನಾನು ನಿದ್ದೆಯಿಲ್ಲದ ರಾತ್ರಿ ಕಳೆದೆ. ರಾಜ್ಯಸಭೆಯಲ್ಲಿ ಅಧಿಕಾರಿಗಳು, ವರದಿಗಾರರು, ಪ್ರಧಾನ ಕಾರ್ಯದರ್ಶಿಗಳು ಕುಳಿತುಕೊಳ್ಳುವ ಮೇಜಿನ ಜಾಗವನ್ನು ದೇಗುಲದ ಗರ್ಭಗುಡಿ ಎಂದು ಪರಿಗಣಿಸಲಾಗುತ್ತದೆ’ ಎಂದು ಅವರು ಭಾವುಕರಾದರು.</p>.<p>‘ಈ ಘಟನೆಯಿಂದ ನನಗೆ ಬಹಳ ಬೇಸರವಾಗಿದೆ. ದೇವಸ್ಥಾನದಲ್ಲಿ ಗರ್ಭಗುಡಿ ತನಕ ಮಾತ್ರ ಭಕ್ತರು ಪ್ರವೇಶಿಸಬಹುದು. ಅದರಂತೆ ಸದನಕ್ಕೂ ಒಂದು ಪಾವಿತ್ರ್ಯತೆ ಇದೆ. ಈ ಗದ್ದಲದಿಂದ ಸದನದ ಪಾವಿತ್ರ್ಯತೆ ನಾಶವಾಗಿದೆ’ ಎಂದು ಅವರು ಹೇಳಿದರು.</p>.<p>‘ಮಂಗಳವಾರ ಸದನದಲ್ಲಿ ಚರ್ಚೆಗಾಗಿ ಪಟ್ಟಿ ಮಾಡಲಾದ ವಿಷಯಗಳು ಈ ರೀತಿಯ ಗದ್ದಲ ಸೃಷ್ಟಿಯಾಗಲು ಸಾಧ್ಯವಿಲ್ಲ ಎಂದು ನಾನು ಭಾವಿಸಿದ್ದೆ. ಈ ಪಟ್ಟಿಯಲ್ಲಿ ನೂತನ ಕೃಷಿ ಕಾಯ್ದೆಯೂ ಇತ್ತು. ಈ ವಿಷಯವಾಗಿ ಚರ್ಚಿಸಲು ಬಹುತೇಕ ನಾಯಕ ಕಾಯುತ್ತಿದ್ದರು. ಆದರೂ ಯಾಕೆ ಗದ್ದಲ ಸೃಷ್ಟಿಯಾಯಿತು ಎಂಬುದು ನನಗೆ ತಿಳಿಯುತ್ತಿಲ್ಲ’ ಎಂದರು.</p>.<p>‘ ರೈತರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಸುವರ್ಣ ಅವಕಾಶ ಇತ್ತು. ಬಹುಶಃ ಸದನ ಕಾರ್ಯನಿರ್ವಹಿಸದಂತೆ ತಡೆಯುವುದೇ ಗದ್ದಲದ ಹಿಂದಿನ ಉದ್ದೇಶವಾಗಿರಬೇಕು’ ಎಂದು ಅವರು ಹೇಳಿದರು.</p>.<p>‘ಒಬ್ಬ ಸಭಾಪತಿಯಾಗಿ ಪ್ರಜಾಪ್ರಭುತ್ವದ ದೇಗುಲದಲ್ಲಿ ನಡೆದ ಈ ರೀತಿಯ ಘಟನೆಗಳ ಪರಿಣಾಮ ಏನಿರಬಹುದೆಂದು ಊಹಿಸಲು ನನಗೆ ಭಯವಾಗುತ್ತಿದೆ’ ಎಂದೂ ಅವರು ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>