ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಕಳ್ಳ ಸಾಗಣೆ ಪ್ರಕರಣ; ಶಿವಶಂಕರ್‌ ಕಸ್ಟಡಿ ಅವಧಿ ವಿಸ್ತರಣೆ

Last Updated 5 ನವೆಂಬರ್ 2020, 12:09 IST
ಅಕ್ಷರ ಗಾತ್ರ

ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡು ಜಾರಿ ನಿರ್ದೇಶನಾಲಯದ ವಶದಲ್ಲಿರುವ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರ ಕಸ್ಟಡಿಯ ಅವಧಿಯನ್ನು ಇಲ್ಲಿನ ವಿಶೇಷ ನಾಯಾಲಯ ಏಳು ದಿನಗಳವರೆಗೂ ವಿಸ್ತರಿಸಿದೆ.

ಈ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ ಹಾಗೂ ಶಿವಶಂಕರ್‌ ಅವರ ನಡುವೆ ನಡೆದ ಮಾತುಕತೆ ಬಗ್ಗೆ ತನಿಖೆ ನಡೆಸಲು ಶಿವಶಂಕರ್‌ ಅವರ ಕಸ್ಟಡಿಯನ್ನು ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಅರ್ಜಿಯನ್ನು ಪರಿಗಣಿಸಿದ ಕೋರ್ಟ್‌, ಶಿವಶಂಕರ್‌ ಅವರ ಕಸ್ಟಡಿಯನ್ನು ಮುಂದಿನ ಏಳು ದಿನಗಳವರೆಗೆ ವಿಸ್ತರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT