ರಾಮೇಶ್ವರ (ತಮಿಳುನಾಡು): ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ಕಲ್ಲು ತೂರಿ ಬೆದರಿಸಿದ್ದಾರೆ. ಈ ಘಟನೆಯಲ್ಲಿ ಮೀನುಗಾರಿಕೆಯ ಸಾಕಷ್ಟು ಬಲೆಗಳಿಗೆಹಾನಿಯಾಗಿದೆ ಎಂದು ತಮಿಳುನಾಡು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
10 ಮೀನುಗಾರಿಕಾ ದೋಣಿಗಳಲ್ಲಿ ಬಂದ ಶ್ರೀಲಂಕಾ ನೌಕಾ ಸಿಬ್ಬಂದಿ ಭಾರತೀಯ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದರು. ಆದರೆ ಯಾರಿಗೂ ಗಾಯಗಳಾಗಿಲ್ಲ. ಈ ಘಟನೆಯು ಕಚ್ಚತೀವು ಬಳಿ ನಡೆದಿದೆ ಎಂದು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಗುರುವಾರ ಹೇಳಿದ್ದಾರೆ.
ಈ ಸಂಬಂಧ ಮೀನುಗಾರಿಕಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಮೀನುಗಾರರ ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.