ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಮೀನುಗಾರರ ಮೇಲೆ ಕಲ್ಲು ತೂರಿದ ಶ್ರೀಲಂಕಾ ನೌಕಾಪಡೆ

Last Updated 7 ಅಕ್ಟೋಬರ್ 2021, 7:54 IST
ಅಕ್ಷರ ಗಾತ್ರ

ರಾಮೇಶ್ವರ (ತಮಿಳುನಾಡು): ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ಕಲ್ಲು ತೂರಿ ಬೆದರಿಸಿದ್ದಾರೆ. ಈ ಘಟನೆಯಲ್ಲಿ ಮೀನುಗಾರಿಕೆಯ ಸಾಕಷ್ಟು ಬಲೆಗಳಿಗೆಹಾನಿಯಾಗಿದೆ ಎಂದು ತಮಿಳುನಾಡು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

10 ಮೀನುಗಾರಿಕಾ ದೋಣಿಗಳಲ್ಲಿ ಬಂದ ಶ್ರೀಲಂಕಾ ನೌಕಾ ಸಿಬ್ಬಂದಿ ಭಾರತೀಯ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದರು. ಆದರೆ ಯಾರಿಗೂ ಗಾಯಗಳಾಗಿಲ್ಲ. ಈ ಘಟನೆಯು ಕಚ್ಚತೀವು ಬಳಿ ನಡೆದಿದೆ ಎಂದು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

ಈ ಸಂಬಂಧ ಮೀನುಗಾರಿಕಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಮೀನುಗಾರರ ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT