1994ರ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ವಿಜಯನ್ ಸೇರಿದಂತೆ ಕೇರಳದ ಪೊಲೀಸ್ ಮತ್ತು ಗುಪ್ತಚರ ವಿಭಾಗದ17 ಮಂದಿ ಮಾಜಿ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದು,ನಂಬಿ ನಾರಾಯಣನ್ ಅವರು ಸಿಬಿಐ ತನಿಖೆಯ ಮೇಲೆ ಪ್ರಭಾವ ಬೀರಲು ತನಿಖಾಧಿಕಾರಿಗಳೊಂದಿಗೆ ಕೋಟ್ಯಂತರ ಮೌಲ್ಯದ ಭೂ ವ್ಯವಹಾರ ನಡೆಸಿದ್ದಾರೆ ಎಂದು ವಿಜಯನ್ ಆರೋಪಿಸಿ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಆರ್. ನಾರಾಯಣ ಪಿಶಾರಡಿ ಅವರು ವಿಜಯನ್ ಅವರ ಮನವಿಯನ್ನು ವಜಾಗೊಳಿಸಿದ್ದಾರೆ.