<p><strong>ಚೆನ್ನೈ: </strong>ಮೇಕೆದಾಟು ಯೋಜನೆ ಕುರಿತು ಮುಂದಿನ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಅಧ್ಯಕ್ಷತೆಯಲ್ಲಿ ಸೋಮವಾರ ಸರ್ವಪಕ್ಷಗಳ ಸಭೆ ನಡೆಯಲಿದೆ.</p>.<p>ಈ ಯೋಜನೆಯನ್ನು ಮುಂದುವರಿಸಲು ಬದ್ಧವಾಗಿರುವುದಾಗಿ ಕರ್ನಾಟಕ ಘೋಷಿಸಿರುವುದರಿಂದ ಎಲ್ಲ ರಾಜಕೀಯ ಪಕ್ಷಗಳ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ. ಜತೆಗೆ, ಕರ್ನಾಟಕದ ನಿರ್ಧಾರವನ್ನು ಖಂಡಿಸಿ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಯೋಜನೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಪ್ರಯತ್ನಗಳನ್ನು ಸ್ಟ್ಯಾಲಿನ್ ಅವರು ಸಭೆಯಲ್ಲಿ ವಿವರಿಸಲಿದ್ದಾರೆ.</p>.<p>ತಮಿಳುನಾಡಿನ ಅನುಮತಿ ಇಲ್ಲದೆಯೇ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ಕಲ್ಪಿಸಬಾರದು. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸುವ ಸಾಧ್ಯತೆ ಇದೆ. ಜತೆಗೆ, ಈ ವಿಷಯದ ಬಗ್ಗೆ ಪ್ರಧಾನಿ ಅವರ ಬಳಿ ಸರ್ವಪಕ್ಷಗಳ ನಿಯೋಗವನ್ನು ಕೊಂಡೊಯ್ಯಬೇಕು ಎಂದು ಎಐಎಡಿಎಂಕೆ ಒತ್ತಾಯಿಸಲಿದೆ.</p>.<p>ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಅವರು ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾಗಿ, ಮೇಕೆದಾಟು ಯೋಜನೆಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಭೇಟಿಯ ಬಳಿಕ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಮೇಕೆದಾಟು ಯೋಜನೆ ಕುರಿತು ಮುಂದಿನ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಅಧ್ಯಕ್ಷತೆಯಲ್ಲಿ ಸೋಮವಾರ ಸರ್ವಪಕ್ಷಗಳ ಸಭೆ ನಡೆಯಲಿದೆ.</p>.<p>ಈ ಯೋಜನೆಯನ್ನು ಮುಂದುವರಿಸಲು ಬದ್ಧವಾಗಿರುವುದಾಗಿ ಕರ್ನಾಟಕ ಘೋಷಿಸಿರುವುದರಿಂದ ಎಲ್ಲ ರಾಜಕೀಯ ಪಕ್ಷಗಳ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ. ಜತೆಗೆ, ಕರ್ನಾಟಕದ ನಿರ್ಧಾರವನ್ನು ಖಂಡಿಸಿ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಯೋಜನೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಪ್ರಯತ್ನಗಳನ್ನು ಸ್ಟ್ಯಾಲಿನ್ ಅವರು ಸಭೆಯಲ್ಲಿ ವಿವರಿಸಲಿದ್ದಾರೆ.</p>.<p>ತಮಿಳುನಾಡಿನ ಅನುಮತಿ ಇಲ್ಲದೆಯೇ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ಕಲ್ಪಿಸಬಾರದು. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸುವ ಸಾಧ್ಯತೆ ಇದೆ. ಜತೆಗೆ, ಈ ವಿಷಯದ ಬಗ್ಗೆ ಪ್ರಧಾನಿ ಅವರ ಬಳಿ ಸರ್ವಪಕ್ಷಗಳ ನಿಯೋಗವನ್ನು ಕೊಂಡೊಯ್ಯಬೇಕು ಎಂದು ಎಐಎಡಿಎಂಕೆ ಒತ್ತಾಯಿಸಲಿದೆ.</p>.<p>ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಅವರು ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾಗಿ, ಮೇಕೆದಾಟು ಯೋಜನೆಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಭೇಟಿಯ ಬಳಿಕ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>