<p class="title"><strong>ಚೆನ್ನೈ: </strong>ಕೋವಿಡ್ ಲಾಕ್ಡೌನ್ ಕಾರಣ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ನೆರವಾಗಲು ಕೇಂದ್ರದ ಮೇಲೆ ಒತ್ತಡ ಹೇರಲು ಕೋರಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಿಜೆಪಿಯೇತರ ಸರ್ಕಾರಗಳ 12 ಮಂದಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p>.<p class="title">ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಜೊತೆಗೆ ಈ ಕುರಿತು ಚರ್ಚಿಸಬೇಕಿದೆ ಎಂದು ಗಮನಸೆಳೆದ್ದಾರೆ. ಆಂಧ್ರಪ್ರದೇಶ, ದೆಹಲಿ, ತೆಲಂಗಾಣ, ಒಡಿಶಾ, ಕೇರಳ, ಮಹಾರಾಷ್ಟ್ರ ಸೇರಿದಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ.</p>.<p class="title">ದೇಶದಲ್ಲಿ ಕೋವಿಡ್ ಲಸಿಕೆ ನೀತಿಯು ನಮ್ಮಗಳ ಒಟ್ಟು ಯತ್ನದ ಫಲವಾಗಿಯೇ ಬದಲಾಗಿದೆ ಎಂಬುದು ನನಗೆ ಸಂತೋಷ ಉಂಟುಮಾಡಿದೆ ಎಂದು ಉಲ್ಲೇಖಿಸಿದ್ದಾರೆ.</p>.<p class="title">18–45 ವರ್ಷದವರಿಗೆ ಉಚಿತವಾಗಿ ಲಸಿಕೆಯನ್ನು ನೀಡುವ ಹೊಣೆಯನ್ನು ಈಗ ಕೇಂದ್ರವೇ ಹೊತ್ತುಕೊಂಡಿದೆ. 2020ರಲ್ಲಿ ಸಣ್ಣ ಕೈಗಾರಿಕೆಗಳಿಗೆ ಸಾಲ ಮರುಪಾವತಿ ಕುರಿತು ಕೆಲ ರಿಯಾಯಿತಿ ನೀಡಲಾಗಿತ್ತು. ಈ ವರ್ಷ ಅಂತಹ ನೆರವು ನೀಡಿಲ್ಲ.2021–22ನೇ ವರ್ಷದ ಮೊದಲ ಎರಡು ತ್ರೈಮಾಸಿಕಕ್ಕೆ ಅನ್ವಯಿಸಿ ನೆರವು ನೀಡುವ ಕುರಿತು ಒತ್ತಡ ಹೇರಬೇಕಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ: </strong>ಕೋವಿಡ್ ಲಾಕ್ಡೌನ್ ಕಾರಣ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ನೆರವಾಗಲು ಕೇಂದ್ರದ ಮೇಲೆ ಒತ್ತಡ ಹೇರಲು ಕೋರಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಿಜೆಪಿಯೇತರ ಸರ್ಕಾರಗಳ 12 ಮಂದಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p>.<p class="title">ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಜೊತೆಗೆ ಈ ಕುರಿತು ಚರ್ಚಿಸಬೇಕಿದೆ ಎಂದು ಗಮನಸೆಳೆದ್ದಾರೆ. ಆಂಧ್ರಪ್ರದೇಶ, ದೆಹಲಿ, ತೆಲಂಗಾಣ, ಒಡಿಶಾ, ಕೇರಳ, ಮಹಾರಾಷ್ಟ್ರ ಸೇರಿದಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ.</p>.<p class="title">ದೇಶದಲ್ಲಿ ಕೋವಿಡ್ ಲಸಿಕೆ ನೀತಿಯು ನಮ್ಮಗಳ ಒಟ್ಟು ಯತ್ನದ ಫಲವಾಗಿಯೇ ಬದಲಾಗಿದೆ ಎಂಬುದು ನನಗೆ ಸಂತೋಷ ಉಂಟುಮಾಡಿದೆ ಎಂದು ಉಲ್ಲೇಖಿಸಿದ್ದಾರೆ.</p>.<p class="title">18–45 ವರ್ಷದವರಿಗೆ ಉಚಿತವಾಗಿ ಲಸಿಕೆಯನ್ನು ನೀಡುವ ಹೊಣೆಯನ್ನು ಈಗ ಕೇಂದ್ರವೇ ಹೊತ್ತುಕೊಂಡಿದೆ. 2020ರಲ್ಲಿ ಸಣ್ಣ ಕೈಗಾರಿಕೆಗಳಿಗೆ ಸಾಲ ಮರುಪಾವತಿ ಕುರಿತು ಕೆಲ ರಿಯಾಯಿತಿ ನೀಡಲಾಗಿತ್ತು. ಈ ವರ್ಷ ಅಂತಹ ನೆರವು ನೀಡಿಲ್ಲ.2021–22ನೇ ವರ್ಷದ ಮೊದಲ ಎರಡು ತ್ರೈಮಾಸಿಕಕ್ಕೆ ಅನ್ವಯಿಸಿ ನೆರವು ನೀಡುವ ಕುರಿತು ಒತ್ತಡ ಹೇರಬೇಕಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>