<div dir="ltr"><span style="font-size:14pt;font-family:Cambria, serif;"><strong>ಚೆನ್ನೈ</strong>: ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಿರುವ ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಒಡಿಶಾದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ನಿಷೇಧವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. </span></div>.<div dir="ltr"><span style="font-size:14pt;font-family:Cambria, serif;">‘ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ನಿಗದಿಪಡಿಸಿರುವ ಮಾನದಂಡಗಳ ಅಡಿಯಲ್ಲಿ ಬರುವ ಪಟಾಕಿಗಳ ಮಾರಾಟಕ್ಕೆ ಅವಕಾಶ ನೀಡಬೇಕು’ ಎಂದೂ ಕೋರಿದ್ದಾರೆ. </span></div>.<div dir="ltr"><span style="font-size:14pt;font-family:Cambria, serif;">‘ಪಟಾಕಿ ಉದ್ಯಮವು ಶಿವಕಾಶಿ ಪಟ್ಟಣದ ಸುತ್ತಲೂ ಕೇಂದ್ರೀಕೃತವಾಗಿದ್ದು, ತಮಿಳುನಾಡಿನ ಪ್ರಮುಖ ಕೈಗಾರಿಕಾ ಚಟುವಟಿಕೆಗಳಲ್ಲಿ ಒಂದಾಗಿದೆ. ರಾಜ್ಯದ ಸುಮಾರು 8 ಲಕ್ಷ ಕಾರ್ಮಿಕರು ಪಟಾಕಿ ಉದ್ಯಮವನ್ನು ಅವಲಂಬಿಸಿದ್ದಾರೆ, ಇದು ದೇಶದಲ್ಲಿಯೇ ದೊಡ್ಡದು. ಹಬ್ಬದ ಸಮಯದಲ್ಲಿ ಪಟಾಕಿ ನಿಷೇಧ ಜಾರಿಗೆ ತಂದಿರುವ ಬಗ್ಗೆ ಮರುಪರಿಶೀಲಿಸಬೇಕೆಂದು’ ಎಂದಿದ್ದಾರೆ.</span></div>.<div dir="ltr"><span style="font-size:14pt;font-family:Cambria, serif;">‘ಸುಪ್ರೀಂ ಕೋರ್ಟ್ ಈಗಾಗಲೇ ಕೆಲವು ಮಾಲಿನ್ಯಕಾರಕ ಪಟಾಕಿಗಳನ್ನು ನಿಷೇಧಿಸಿದೆ. ಅಲ್ಲದೆ ಈಗ ಹಸಿರು ಪಟಾಕಿಗಳನ್ನು ತಯಾರಿಸಲಾಗುತ್ತಿದೆ ಎಂಬ ಅಂಶವನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಪಟಾಕಿಗಳ ಮೇಲೆ ಏಕಾಏಕಿ ನಿಷೇಧವು ಸಮಂಜಸವಲ್ಲ. ಇತರ ದೇಶಗಳಲ್ಲಿ ಈ ರೀತಿಯ ನಿಷೇಧ ಜಾರಿಯಲ್ಲಿಲ್ಲ. ಇತರ ರಾಜ್ಯಗಳು ನಿಷೇಧ ಹೇರಿದಲ್ಲಿ ಇಡೀ ಪಟಾಕಿ ಉದ್ಯಮವನ್ನು ಮುಚ್ಚಬೇಕಾಗುತ್ತದೆ. ಇದು 8 ಲಕ್ಷ ಕಾರ್ಮಿಕರ ಬದುಕಿನ ಮೇಲೆ ಪರಿಣಾಮ ಬೀರುತ್ತದೆ’ ಎಂದೂ ಅವರು ವಿವರಿಸಿದ್ದಾರೆ. </span></div>.<div dir="ltr"><span style="font-size:14pt;font-family:Cambria, serif;">‘ಪಟಾಕಿಗಳನ್ನು ಸಿಡಿಸುವುದು ಭಾರತೀಯ ಹಬ್ಬಗಳ ಅದರಲ್ಲೂ ವಿಶೇಷವಾಗಿ ದೀಪಾವಳಿಯ ಅವಿಭಾಜ್ಯ ಅಂಗವಾಗಿದೆ ಎಂದು ನೀವೂ ಒಪ್ಪಿಕೊಳ್ಳುತ್ತೀರಿ. ಪರಿಸರ, ಜೀವನೋಪಾಯ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಸೂಕ್ತವಾದ ಸಮತೋಲಿತ ವಿಧಾನವನ್ನು ಸಾಧ್ಯವಾಗಿಸುವುದು ಅಗತ್ಯವಾಗಿದೆ’ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ. </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div dir="ltr"><span style="font-size:14pt;font-family:Cambria, serif;"><strong>ಚೆನ್ನೈ</strong>: ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಿರುವ ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಒಡಿಶಾದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ನಿಷೇಧವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. </span></div>.<div dir="ltr"><span style="font-size:14pt;font-family:Cambria, serif;">‘ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ನಿಗದಿಪಡಿಸಿರುವ ಮಾನದಂಡಗಳ ಅಡಿಯಲ್ಲಿ ಬರುವ ಪಟಾಕಿಗಳ ಮಾರಾಟಕ್ಕೆ ಅವಕಾಶ ನೀಡಬೇಕು’ ಎಂದೂ ಕೋರಿದ್ದಾರೆ. </span></div>.<div dir="ltr"><span style="font-size:14pt;font-family:Cambria, serif;">‘ಪಟಾಕಿ ಉದ್ಯಮವು ಶಿವಕಾಶಿ ಪಟ್ಟಣದ ಸುತ್ತಲೂ ಕೇಂದ್ರೀಕೃತವಾಗಿದ್ದು, ತಮಿಳುನಾಡಿನ ಪ್ರಮುಖ ಕೈಗಾರಿಕಾ ಚಟುವಟಿಕೆಗಳಲ್ಲಿ ಒಂದಾಗಿದೆ. ರಾಜ್ಯದ ಸುಮಾರು 8 ಲಕ್ಷ ಕಾರ್ಮಿಕರು ಪಟಾಕಿ ಉದ್ಯಮವನ್ನು ಅವಲಂಬಿಸಿದ್ದಾರೆ, ಇದು ದೇಶದಲ್ಲಿಯೇ ದೊಡ್ಡದು. ಹಬ್ಬದ ಸಮಯದಲ್ಲಿ ಪಟಾಕಿ ನಿಷೇಧ ಜಾರಿಗೆ ತಂದಿರುವ ಬಗ್ಗೆ ಮರುಪರಿಶೀಲಿಸಬೇಕೆಂದು’ ಎಂದಿದ್ದಾರೆ.</span></div>.<div dir="ltr"><span style="font-size:14pt;font-family:Cambria, serif;">‘ಸುಪ್ರೀಂ ಕೋರ್ಟ್ ಈಗಾಗಲೇ ಕೆಲವು ಮಾಲಿನ್ಯಕಾರಕ ಪಟಾಕಿಗಳನ್ನು ನಿಷೇಧಿಸಿದೆ. ಅಲ್ಲದೆ ಈಗ ಹಸಿರು ಪಟಾಕಿಗಳನ್ನು ತಯಾರಿಸಲಾಗುತ್ತಿದೆ ಎಂಬ ಅಂಶವನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಪಟಾಕಿಗಳ ಮೇಲೆ ಏಕಾಏಕಿ ನಿಷೇಧವು ಸಮಂಜಸವಲ್ಲ. ಇತರ ದೇಶಗಳಲ್ಲಿ ಈ ರೀತಿಯ ನಿಷೇಧ ಜಾರಿಯಲ್ಲಿಲ್ಲ. ಇತರ ರಾಜ್ಯಗಳು ನಿಷೇಧ ಹೇರಿದಲ್ಲಿ ಇಡೀ ಪಟಾಕಿ ಉದ್ಯಮವನ್ನು ಮುಚ್ಚಬೇಕಾಗುತ್ತದೆ. ಇದು 8 ಲಕ್ಷ ಕಾರ್ಮಿಕರ ಬದುಕಿನ ಮೇಲೆ ಪರಿಣಾಮ ಬೀರುತ್ತದೆ’ ಎಂದೂ ಅವರು ವಿವರಿಸಿದ್ದಾರೆ. </span></div>.<div dir="ltr"><span style="font-size:14pt;font-family:Cambria, serif;">‘ಪಟಾಕಿಗಳನ್ನು ಸಿಡಿಸುವುದು ಭಾರತೀಯ ಹಬ್ಬಗಳ ಅದರಲ್ಲೂ ವಿಶೇಷವಾಗಿ ದೀಪಾವಳಿಯ ಅವಿಭಾಜ್ಯ ಅಂಗವಾಗಿದೆ ಎಂದು ನೀವೂ ಒಪ್ಪಿಕೊಳ್ಳುತ್ತೀರಿ. ಪರಿಸರ, ಜೀವನೋಪಾಯ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಸೂಕ್ತವಾದ ಸಮತೋಲಿತ ವಿಧಾನವನ್ನು ಸಾಧ್ಯವಾಗಿಸುವುದು ಅಗತ್ಯವಾಗಿದೆ’ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ. </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>