ನಿಶ್ಚಿತ ನಿರ್ಣಯಗಳಿಲ್ಲದೇ ಕೃಷಿ ಕಾಯ್ದೆಗಳ ಕುರಿತು ಸರ್ಕಾರ ಮತ್ತು ರೈತ ಸಂಘಗಳ ಪ್ರತಿನಿಧಿಗಳ ನಡುವೆ ನಡೆದ ಒಂಬತ್ತು ಸುತ್ತಿನ ಮಾತಕತೆಗಳು ವಿಫಲಗೊಂಡಿವೆ. ಬುಧವಾರ(ಇಂದು) ಹತ್ತನೇ ಸುತ್ತಿನ ಮಾತುಕತೆಯೂ ನಿಗದಿಯಾಗಿದೆ. ಈ ಎಲ್ಲ ಬೆಳವಣಿಗೆಗಳನ್ನು ಪಕ್ಕಕ್ಕಿಟ್ಟು, ‘ಮುಂದೆ ಏನು ಮಾಡಬೇಕು, ಯಾವ ವಿಷಯಗಳನ್ನು ಕೈಬಿಡಬೇಕು‘ ಎಂಬುದನ್ನು ಇಟ್ಟುಕೊಂಡು ಹೊಸದಾಗಿ ಮಾತುಕತೆ ಆರಂಭಿಸುವಂತೆ ಚಿದಂಬರಂ ಟ್ವೀಟ್ ಮಾಡಿದ್ದಾರೆ.