<p><strong>ಜೈಪುರ:</strong> ದೂರವಾಣಿ ಕದ್ದಾಲಿಕೆಯಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲಿಗ ಶಾಸಕನ ಆರೋಪವನ್ನು ರಾಜಸ್ಥಾನ ಸಾರಿಗೆ ಸಚಿವ ಪ್ರತಾಪ್ ಸಿಂಗ್ ಕಚಾರಿಯವಸ್ ತಳ್ಳಿ ಹಾಕಿದ್ದಾರೆ.</p>.<p>ರಾಜಸ್ಥಾನದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತೀವ್ರವಾಗಿ ಭುಗಿಲೆದ್ದಿದೆ. ಭಾನುವಾರದಂದು ಕೆಲವು ಶಾಸಕರ ದೂರವಾಣಿ ಕರೆಗಳು ಕದ್ದಾಲಿಕೆಯಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ವೇದ ಪ್ರಕಾಶ್ ಸೋಲಂಕಿ ಆರೋಪಿಸಿದ್ದರು.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, 'ದೂರವಾಣಿ ಕದ್ದಾಲಿಕೆ ಮಾಡಲಾಗಿದೆ ಎಂಬ ಬಗ್ಗೆ ಶಾಸಕರಿಗೆ ಮಾಹಿತಿಯಿದ್ದರೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಿಳಿಸಬೇಕು' ಎಂದಿದ್ದಾರೆ.</p>.<p>'ರಾಜ್ಯ ಸರ್ಕಾರವು ಯಾರ ಫೋನ್ ಅನ್ನು ಕದ್ದಾಲಿಕೆ ಮಾಡುವುದಿಲ್ಲ. ಇದು ನಮ್ಮ ಸ್ವಭಾವವಲ್ಲ. ಇಬ್ಬರು ಮೂವರ ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಶಾಸಕರೊಬ್ಬರು ಆರೋಪಿಸಿದ್ದಾರೆ. ಅಂತಹ ಸ್ಥಿತಿಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಅವರ ಗಮನಕ್ಕೆ ತರಬೇಕು' ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/phone-tapping-issue-resurfaces-in-rajasthan-838514.html" itemprop="url">ನಮ್ಮ ಫೋನ್ ಕರೆ ಕದ್ದಾಲಿಕೆಯಾಗುತ್ತಿದೆ: ಸಚಿನ್ ಪೈಲಟ್ ಬೆಂಬಲಿಗ ಶಾಸಕರ ಆರೋಪ </a></p>.<p>ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಇಡೀ ದೇಶಕ್ಕೆ ಮಾದರಿ ರಾಜ್ಯವಾಗಿ ಕಾಂಗ್ರೆಸ್ ಕೆಲಸ ನಿರ್ವಹಿಸಿದೆ. ಅಲ್ಲದೆ ಶಾಸಕರು ನೀಡುವ ಅಂತಹ ಹೇಳಿಕೆಯನ್ನು ಸಮರ್ಥಿಸಲಾಗುವುದಿಲ್ಲ ಎಂದಿದ್ದಾರೆ.</p>.<p>ಸಚಿನ್ ಪೈಲಟ್ ಅವರ ಬೆಂಬಲಿಗರಾಗಿರುವ ಸೋಲಂಕಿ, ಶಾಸಕರನ್ನು ಹೆಸರಿಸದೇ ದೂರವಾಣಿ ಕದ್ದಾಲಿಕೆಯ ಬಗ್ಗೆ ಆರೋಪ ಮಾಡಿದ್ದರು. ಅಲ್ಲದೆ ಶಾಸಕರಿಗೆ ವಿವಿಧ ಏಜೆನ್ಸಿಗಳಿಂದ ಸಿಲುಕಿಸುವ ಭಯವಿದೆ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ದೂರವಾಣಿ ಕದ್ದಾಲಿಕೆಯಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲಿಗ ಶಾಸಕನ ಆರೋಪವನ್ನು ರಾಜಸ್ಥಾನ ಸಾರಿಗೆ ಸಚಿವ ಪ್ರತಾಪ್ ಸಿಂಗ್ ಕಚಾರಿಯವಸ್ ತಳ್ಳಿ ಹಾಕಿದ್ದಾರೆ.</p>.<p>ರಾಜಸ್ಥಾನದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತೀವ್ರವಾಗಿ ಭುಗಿಲೆದ್ದಿದೆ. ಭಾನುವಾರದಂದು ಕೆಲವು ಶಾಸಕರ ದೂರವಾಣಿ ಕರೆಗಳು ಕದ್ದಾಲಿಕೆಯಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ವೇದ ಪ್ರಕಾಶ್ ಸೋಲಂಕಿ ಆರೋಪಿಸಿದ್ದರು.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, 'ದೂರವಾಣಿ ಕದ್ದಾಲಿಕೆ ಮಾಡಲಾಗಿದೆ ಎಂಬ ಬಗ್ಗೆ ಶಾಸಕರಿಗೆ ಮಾಹಿತಿಯಿದ್ದರೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಿಳಿಸಬೇಕು' ಎಂದಿದ್ದಾರೆ.</p>.<p>'ರಾಜ್ಯ ಸರ್ಕಾರವು ಯಾರ ಫೋನ್ ಅನ್ನು ಕದ್ದಾಲಿಕೆ ಮಾಡುವುದಿಲ್ಲ. ಇದು ನಮ್ಮ ಸ್ವಭಾವವಲ್ಲ. ಇಬ್ಬರು ಮೂವರ ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಶಾಸಕರೊಬ್ಬರು ಆರೋಪಿಸಿದ್ದಾರೆ. ಅಂತಹ ಸ್ಥಿತಿಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಅವರ ಗಮನಕ್ಕೆ ತರಬೇಕು' ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/phone-tapping-issue-resurfaces-in-rajasthan-838514.html" itemprop="url">ನಮ್ಮ ಫೋನ್ ಕರೆ ಕದ್ದಾಲಿಕೆಯಾಗುತ್ತಿದೆ: ಸಚಿನ್ ಪೈಲಟ್ ಬೆಂಬಲಿಗ ಶಾಸಕರ ಆರೋಪ </a></p>.<p>ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಇಡೀ ದೇಶಕ್ಕೆ ಮಾದರಿ ರಾಜ್ಯವಾಗಿ ಕಾಂಗ್ರೆಸ್ ಕೆಲಸ ನಿರ್ವಹಿಸಿದೆ. ಅಲ್ಲದೆ ಶಾಸಕರು ನೀಡುವ ಅಂತಹ ಹೇಳಿಕೆಯನ್ನು ಸಮರ್ಥಿಸಲಾಗುವುದಿಲ್ಲ ಎಂದಿದ್ದಾರೆ.</p>.<p>ಸಚಿನ್ ಪೈಲಟ್ ಅವರ ಬೆಂಬಲಿಗರಾಗಿರುವ ಸೋಲಂಕಿ, ಶಾಸಕರನ್ನು ಹೆಸರಿಸದೇ ದೂರವಾಣಿ ಕದ್ದಾಲಿಕೆಯ ಬಗ್ಗೆ ಆರೋಪ ಮಾಡಿದ್ದರು. ಅಲ್ಲದೆ ಶಾಸಕರಿಗೆ ವಿವಿಧ ಏಜೆನ್ಸಿಗಳಿಂದ ಸಿಲುಕಿಸುವ ಭಯವಿದೆ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>