<p><strong>ನವದೆಹಲಿ:</strong> ತೀವ್ರತರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.</p>.<p>ಮಕ್ಕಳು ಹಾಗೂ ಮಹಿಳೆಯರಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸುವ ಸಲುವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.</p>.<p>ತೀವ್ರತರ ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಬೇಕು. ಅಗತ್ಯ ಬಿದ್ದರೆ ಆಸ್ಪತ್ರೆಗಳಿಗೆ ದಾಖಲಿಸಲು ಶಿಫಾರಸು ಮಾಡಬೇಕು. ಈ ಕಾರ್ಯವನ್ನು ಜ. 31ರ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಚಿವಾಲಯ ಸೂಚಿಸಿದೆ.</p>.<p>‘ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ’ವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪೌಷ್ಟಿಕತೆಗೆ ಸಂಬಂಧಿಸಿದ ಮಾನದಂಡದ ಪ್ರಕಾರ, ಎಲ್ಲ ಫಲಾನುಭವಿಗಳಿಗೆ ಈ ಕಾರ್ಯಕ್ರಮದ ಲಾಭ ದೊರೆಯುವಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಲಾಗಿದೆ.</p>.<p>ತೀವ್ರತರ ಅಪೌಷ್ಟಿಕತೆ ಇರುವ ಮಕ್ಕಳ ಸಮೀಕ್ಷೆಗಾಗಿ ‘ಪೋಷಣ್ ಟ್ರ್ಯಾಕರ್’ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸಚಿವಾಲಯ ಸೂಚಿಸಿದೆ.</p>.<p>ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಪೌಷ್ಟಿಕ ಆಹಾರ ಪೂರೈಕೆ ಆಗುತ್ತಿರುವುದು, ಕಾರ್ಯಕ್ರಮ ಅನುಷ್ಠಾನ ಜವಾಬ್ದಾರಿ ಹೊತ್ತವರ ಹಾಜರಾತಿ ಸೇರಿದಂತೆ ಮಹತ್ವದ ಮಾಹಿತಿಯನ್ನು ಈ ವ್ಯವಸ್ಥೆ ಸಂಗ್ರಹಿಸಿ, ಸಚಿವಾಲಯಕ್ಕೆ ರವಾನಿಸುವುದು ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.</p>.<p>‘ಪೌಷ್ಟಿಕತೆ ಹೆಚ್ಚಿಸಲು ಆಯುಷ್ ಪರಿಕಲ್ಪನೆಯಂತೆ ಆಹಾರ ಸೇವನೆ, ಆರೋಗ್ಯಕರ ಜೀವನ ಶೈಲಿ ರೂಪಿಸಿಕೊಳ್ಳುವ ಬಗ್ಗೆ ಫಲಾನುಭವಿಗಳಲ್ಲಿ ಅರಿವು ಮೂಡಿಸಲು’ ಸಚಿವಾಲಯ ಸೂಚಿಸಿದೆ.</p>.<p>‘ಅಪೌಷ್ಟಿಕತೆಯನ್ನು ಹೋಗಲಾಡಿಸಲು ಸಮುದಾಯ ಆಧಾರಿತ ಕಾರ್ಯಕ್ರಮಗಳೇ ಪರಿಣಾಮಕಾರಿ. ಇದರಿಂದ ಹೆಚ್ಚು ಮಕ್ಕಳಿಗೆ ಪೌಷ್ಟಿಕ ಆಹಾರ, ಉತ್ತಮ ವೈದ್ಯಕೀಯ ಸೇವೆ ನೀಡಲು ಸಾಧ್ಯ’ ಎಂದು ನವದೆಹಲಿ ಮೂಲದ ಆಹಾರ ಮತ್ತು ಪೌಷ್ಟಿಕ ಸುರಕ್ಷತೆ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಡಾ.ಸುಜೀತ್ ರಂಜನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತೀವ್ರತರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.</p>.<p>ಮಕ್ಕಳು ಹಾಗೂ ಮಹಿಳೆಯರಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸುವ ಸಲುವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.</p>.<p>ತೀವ್ರತರ ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಬೇಕು. ಅಗತ್ಯ ಬಿದ್ದರೆ ಆಸ್ಪತ್ರೆಗಳಿಗೆ ದಾಖಲಿಸಲು ಶಿಫಾರಸು ಮಾಡಬೇಕು. ಈ ಕಾರ್ಯವನ್ನು ಜ. 31ರ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಚಿವಾಲಯ ಸೂಚಿಸಿದೆ.</p>.<p>‘ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ’ವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪೌಷ್ಟಿಕತೆಗೆ ಸಂಬಂಧಿಸಿದ ಮಾನದಂಡದ ಪ್ರಕಾರ, ಎಲ್ಲ ಫಲಾನುಭವಿಗಳಿಗೆ ಈ ಕಾರ್ಯಕ್ರಮದ ಲಾಭ ದೊರೆಯುವಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಲಾಗಿದೆ.</p>.<p>ತೀವ್ರತರ ಅಪೌಷ್ಟಿಕತೆ ಇರುವ ಮಕ್ಕಳ ಸಮೀಕ್ಷೆಗಾಗಿ ‘ಪೋಷಣ್ ಟ್ರ್ಯಾಕರ್’ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸಚಿವಾಲಯ ಸೂಚಿಸಿದೆ.</p>.<p>ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಪೌಷ್ಟಿಕ ಆಹಾರ ಪೂರೈಕೆ ಆಗುತ್ತಿರುವುದು, ಕಾರ್ಯಕ್ರಮ ಅನುಷ್ಠಾನ ಜವಾಬ್ದಾರಿ ಹೊತ್ತವರ ಹಾಜರಾತಿ ಸೇರಿದಂತೆ ಮಹತ್ವದ ಮಾಹಿತಿಯನ್ನು ಈ ವ್ಯವಸ್ಥೆ ಸಂಗ್ರಹಿಸಿ, ಸಚಿವಾಲಯಕ್ಕೆ ರವಾನಿಸುವುದು ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.</p>.<p>‘ಪೌಷ್ಟಿಕತೆ ಹೆಚ್ಚಿಸಲು ಆಯುಷ್ ಪರಿಕಲ್ಪನೆಯಂತೆ ಆಹಾರ ಸೇವನೆ, ಆರೋಗ್ಯಕರ ಜೀವನ ಶೈಲಿ ರೂಪಿಸಿಕೊಳ್ಳುವ ಬಗ್ಗೆ ಫಲಾನುಭವಿಗಳಲ್ಲಿ ಅರಿವು ಮೂಡಿಸಲು’ ಸಚಿವಾಲಯ ಸೂಚಿಸಿದೆ.</p>.<p>‘ಅಪೌಷ್ಟಿಕತೆಯನ್ನು ಹೋಗಲಾಡಿಸಲು ಸಮುದಾಯ ಆಧಾರಿತ ಕಾರ್ಯಕ್ರಮಗಳೇ ಪರಿಣಾಮಕಾರಿ. ಇದರಿಂದ ಹೆಚ್ಚು ಮಕ್ಕಳಿಗೆ ಪೌಷ್ಟಿಕ ಆಹಾರ, ಉತ್ತಮ ವೈದ್ಯಕೀಯ ಸೇವೆ ನೀಡಲು ಸಾಧ್ಯ’ ಎಂದು ನವದೆಹಲಿ ಮೂಲದ ಆಹಾರ ಮತ್ತು ಪೌಷ್ಟಿಕ ಸುರಕ್ಷತೆ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಡಾ.ಸುಜೀತ್ ರಂಜನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>