ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಕೋವಿಡ್ 19 ಮಾರ್ಗಸೂಚಿಯಲ್ಲಿ ರೋಗಿಗಳನ್ನು ಕರೆದೊಯ್ಯುವ ಆಂಬುಲೆನ್ಸ್ಗೆ ಎಷ್ಟು ಬಾಡಿಗೆ ನೀಡಬೇಕೆಂಬ ಅಂಶ ಸೂಚಿಸಿಲ್ಲ. ಹಾಗಾಗಿ, ಆಸ್ಪತ್ರೆಗಳು ರೋಗಿಗಳಿಗೆ ಸಿಕ್ಕಾಪಟ್ಟೆ ಬಾಡಿಗೆ ವಿಧಿಸುತ್ತಿವೆ. ಇದನ್ನು ಸರಿಪಡಿಸಬೇಕು ಎಂದು ಕೋರಿ ‘ಅರ್ಥ್‘ ಸಂಸ್ಥೆಯವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ ಸರ್ಕಾರಗಳೇ ಆಂಬ್ಯುಲೆನ್ಸ್ಗಳಿಗೆ ಯೋಗ್ಯ ಬಾಡಿಗೆಯನ್ನು ನಿಗದಿಪಡಿಸಬೇಕು ಎಂದು ಸೂಚಿಸಿದೆ.